ಬ್ರೇಕಿಂಗ್ ನ್ಯೂಸ್
31-03-26 03:30 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಮಾರ್ಚ್ 31: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢ ರೀತಿಯಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಅಂತ್ಯಕ್ರಿಯೆ ಜೈಶ್ ಉಗ್ರರ ತಾಣ ಬಹಾವಲ್ಪುರದಲ್ಲಿ ನಡೆದಿದೆ.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಐವರು ಸಹೋದರರಿದ್ದು ತಾಹಿರ್ ಅನ್ವರ್ ಹಿರಿಯ ಸೋದರ. ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತಾಹಿರ್ ಈಗ ನಿಗೂಢವಾಗಿ ಸಾವನ್ನಪ್ಪಿದ್ದಾನೆ, ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿರುವ ಹಲವರನ್ನು ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತಾಹಿರ್ ಸಾವಿನ ಬಗ್ಗೆ ವಿವಿಧ ರೀತಿಯ ಊಹಾಪೋಹಗಳು ಹರಡುತ್ತಿವೆ. ಆತನ ಮೇಲೆ ದಾಳಿ ನಡೆದಿದೆಯೇ ಎನ್ನುವ ಬಗ್ಗೆ ದೃಢ ಮಾಹಿತಿ ಲಭ್ಯವಿಲ್ಲ.
ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಭಾರತದ ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆತನ ಸಹೋದರಿ, ಸೋದರಳಿಯ ಹಾಗೂ ಹತ್ತಿರದ ಕುಟುಂಬ ಸದಸ್ಯರು ಸೇರಿದ್ದಾರೆ.
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ 2001ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳನ್ನು ನಡೆಸಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದರ ಮುಖ್ಯಸ್ಥ ಮಸೂದ್ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿದ್ದರೂ, ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಆತನ ಆರೋಗ್ಯ ಬಗ್ಗೆ ವದಂತಿಗಳು ಹರಡುತ್ತಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am