ಬ್ರೇಕಿಂಗ್ ನ್ಯೂಸ್
31-03-26 11:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 31: ಯುದ್ಧ ವಿರಾಮ ಘೋಷಣೆ ನಡುವೆಯೂ ಅಮೆರಿಕ- ಇಸ್ರೇಲ್ ಇರಾನ್ ದೇಶದ ರಾಜಧಾನಿ ಟೆಹ್ರಾನ್ ಮತ್ತು ಪರಮಾಣು ಸ್ಥಾವರಗಳಿರುವ ಇಶ್ಫಹಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪ್ರತಿಯಾಗಿ ಇರಾನಿನ ಐಆರ್ ಜಿಸಿ ಪಡೆ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡುವುದಾಗಿ ಬೆದರಿಕೆ ಹಾಕಿದೆ.
ಅಮೆರಿಕ ತಾಂತ್ರಿಕ ದೈತ್ಯ ಕಂಪನಿಗಳಾದ ಮೈಕ್ರೋಸಾಫ್ಟ್, ಗೂಗಲ್, ಏಪಲ್, ಇಂಟೆಲ್, ಬೋಯಿಂಗ್ ಸೇರಿದಂತೆ 18 ಬಹು ರಾಷ್ಟ್ರೀಯ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿಕೊಂಡಿದ್ದು, ಕೂಡಲೇ ಅದರಲ್ಲಿರುವ ಉದ್ಯೋಗಿಗಳು ಕಚೇರಿ ತೊರೆಯುವಂತೆ ಸೂಚನೆ ನೀಡಿದೆ. ಎಪ್ರಿಲ್ 1ರಂದೇ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸೌದಿ, ದುಬೈನಲ್ಲಿರುವ ಅಮೆರಿಕದ ಕಂಪನಿಗಳಿಗೆ ನಡುಕ ಶುರುವಾಗಿದೆ.
ಅಲ್ಲದೆ, ಅಮೆರಿಕ- ಇಸ್ರೇಲ್ ದಾಳಿಯನ್ನು ಭಯೋತ್ಪಾದಕ ದಾಳಿಯೆಂದು ಐಆರ್ ಜಿಸಿ ಹೇಳಿದ್ದು, ಇವರ ಪ್ರತಿ ದಾಳಿಗೂ ಪ್ರತಿಯಾಗಿ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡಲಾಗುವುದು ಎಂದು ಹೇಳಿದೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಫಾರ್ಮಾ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಖಂಡಿಸಿದ್ದು, ಇಸ್ರೇಲ್ ಯುದ್ಧಾಪರಾಧವನ್ನು ಮಾಡುತ್ತಿದ್ದು ಫಾರ್ಮಾ ಕಂಪನಿಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಅವರ ಗುರಿ ಕ್ಲೀಯರ್ ಆಗಿ ಕಾಣುತ್ತಿದೆ ಎಂದಿದ್ದಾರೆ.
ಇದೇ ವೇಳೆ, ಪಾಕಿಸ್ತಾನ ಮತ್ತು ಚೀನಾವು ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆ ಮಾತುಕತೆ ನಡೆಸುವಂತೆ ಆಗ್ರಹಿಸಿವೆ. ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ತಾವು ಜೊತೆಯಾಗುವುದಾಗಿ ಜಂಟಿ ಹೇಳಿಕೆ ನೀಡಿವೆ. ಇದೇ ವೇಳೆ ಅಮೆರಿಕದಲ್ಲಿ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಅಧ್ಯಕ್ಷ ಟ್ರಂಪ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ದೇಶಾದ್ಯಂತ ಕಳೆದ 3-4 ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm