ಬ್ರೇಕಿಂಗ್ ನ್ಯೂಸ್
01-04-26 11:03 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 1: ಇರಾನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದಲ್ಲಿಯೇ ಒತ್ತಡ ಕೇಳಿಬರುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಹಲವು ದೇಶಗಳು ಕೂಡ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದೇ ವೇಳೆ, ಯುದ್ಧದಿಂದಾಗಿ ಅಮೆರಿಕಕ್ಕೆ ಭಾರೀ ನಷ್ಟವೂ ಉಂಟಾಗಿದ್ದು ಇದು ಅಮೆರಿಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದರ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಅಧ್ಯಕ್ಷರೇ ಅಮೆರಿಕದ ಬಳಿ ಕದನ ವಿರಾಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಟ್ರಂಪ್ ಮಾತನ್ನು ಇರಾನ್ ಸ್ಪಷ್ಟವಾಗಿ ತಳ್ಳಿಹಾಕಿದೆ. ‘ಟ್ರೂತ್ ಸೋಷಿಯಲ್’ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ಇರಾನ್ ಹೊಸ ಆಡಳಿತ ಹಿಂದಿನವರಿಗಿಂತ ಹೆಚ್ಚು ಬುದ್ಧಿವಂತವಾಗಿದ್ದು, ಅಮೆರಿಕದ ಬಳಿ ಯುದ್ಧ ವಿರಾಮವನ್ನು ಕೇಳುತ್ತಿದೆ ಎಂದು ಹೇಳಿದ್ದಾರೆ. ಆದರೆ ಹೋರ್ಮುಜ್ ಜಲಸಂಧಿಯನ್ನು ಎಲ್ಲ ದೇಶಗಳಿಗೆ, ಸ್ವತಂತ್ರವಾಗಿ ಪುನರ್ ಆರಂಭಿಸಿದ ಬಳಿಕ ಮಾತ್ರ ಅಮೆರಿಕ ಕದನ ವಿರಾಮವನ್ನು ಪರಿಗಣಿಸುತ್ತದೆ ಎಂಬ ಶರತ್ತನ್ನೂ ಮುಂದಿಟ್ಟಿದ್ದಾರೆ.
“ಹೋರ್ಮುಜ್ ಜಲಸಂಧಿ ಮುಕ್ತಗೊಳ್ಳುವ ವರೆಗೆ ನಾವು ಕಾಯುತ್ತೇವೆ. ಇಲ್ಲವಾದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶ ಮಾಡುವುದಕ್ಕಾಗಲಿ, ಅಥವಾ ಶಿಲಾಯುಗಕ್ಕೆ ಹಿಂದಕ್ಕೆ ತಳ್ಳುವವರೆಗೆ ನಾವು ಮುಂದುವರೆಯುತ್ತೇವೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯಲ್ಲಿ, ಇರಾನ್ ಯಾವುದೇ ರೀತಿಯ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ನಮ್ಮ ರಕ್ಷಣೆಗೆ ಯಾವುದೇ ಗಡುವು ಇಡುವುದಿಲ್ಲ. ಬೆದರಿಕೆ ಭಾಷೆಯಲ್ಲಿ ಯಾರೂ ಇರಾನ್ ಜನರೊಂದಿಗೆ ಮಾತನಾಡಲು ಸಾಧ್ಯವಿಲ್ಲ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅಮೆರಿಕದೊಂದಿಗೆ ಮಾತುಕತೆಗಳಿಂದ ಫಲಿತಾಂಶ ಸಿಗುತ್ತದೆ ಎಂಬ ವಿಶ್ವಾಸವೇ ಇಲ್ಲ. ವಿಶ್ವಾಸದ ಮಟ್ಟ ಶೂನ್ಯವಾಗಿದೆ ಎಂದವರು ಹೇಳಿದ್ದಾರೆ.
ಭೂಯುದ್ಧದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, “ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಯಾವುದೇ ಭೂ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲೆವು ಎಂದಿದ್ದಾರೆ. ಅಲ್ಲದೆ, ನಮ್ಮ ಷರತ್ತುಗಳು ಸ್ಪಷ್ಟವಾಗಿವೆ. ನಾವು ಯುದ್ಧ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm