ಬ್ರೇಕಿಂಗ್ ನ್ಯೂಸ್
01-04-26 11:03 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 1: ಇರಾನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದಲ್ಲಿಯೇ ಒತ್ತಡ ಕೇಳಿಬರುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಹಲವು ದೇಶಗಳು ಕೂಡ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದೇ ವೇಳೆ, ಯುದ್ಧದಿಂದಾಗಿ ಅಮೆರಿಕಕ್ಕೆ ಭಾರೀ ನಷ್ಟವೂ ಉಂಟಾಗಿದ್ದು ಇದು ಅಮೆರಿಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದರ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಅಧ್ಯಕ್ಷರೇ ಅಮೆರಿಕದ ಬಳಿ ಕದನ ವಿರಾಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಟ್ರಂಪ್ ಮಾತನ್ನು ಇರಾನ್ ಸ್ಪಷ್ಟವಾಗಿ ತಳ್ಳಿಹಾಕಿದೆ. ‘ಟ್ರೂತ್ ಸೋಷಿಯಲ್’ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ಇರಾನ್ ಹೊಸ ಆಡಳಿತ ಹಿಂದಿನವರಿಗಿಂತ ಹೆಚ್ಚು ಬುದ್ಧಿವಂತವಾಗಿದ್ದು, ಅಮೆರಿಕದ ಬಳಿ ಯುದ್ಧ ವಿರಾಮವನ್ನು ಕೇಳುತ್ತಿದೆ ಎಂದು ಹೇಳಿದ್ದಾರೆ. ಆದರೆ ಹೋರ್ಮುಜ್ ಜಲಸಂಧಿಯನ್ನು ಎಲ್ಲ ದೇಶಗಳಿಗೆ, ಸ್ವತಂತ್ರವಾಗಿ ಪುನರ್ ಆರಂಭಿಸಿದ ಬಳಿಕ ಮಾತ್ರ ಅಮೆರಿಕ ಕದನ ವಿರಾಮವನ್ನು ಪರಿಗಣಿಸುತ್ತದೆ ಎಂಬ ಶರತ್ತನ್ನೂ ಮುಂದಿಟ್ಟಿದ್ದಾರೆ.
“ಹೋರ್ಮುಜ್ ಜಲಸಂಧಿ ಮುಕ್ತಗೊಳ್ಳುವ ವರೆಗೆ ನಾವು ಕಾಯುತ್ತೇವೆ. ಇಲ್ಲವಾದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶ ಮಾಡುವುದಕ್ಕಾಗಲಿ, ಅಥವಾ ಶಿಲಾಯುಗಕ್ಕೆ ಹಿಂದಕ್ಕೆ ತಳ್ಳುವವರೆಗೆ ನಾವು ಮುಂದುವರೆಯುತ್ತೇವೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯಲ್ಲಿ, ಇರಾನ್ ಯಾವುದೇ ರೀತಿಯ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ನಮ್ಮ ರಕ್ಷಣೆಗೆ ಯಾವುದೇ ಗಡುವು ಇಡುವುದಿಲ್ಲ. ಬೆದರಿಕೆ ಭಾಷೆಯಲ್ಲಿ ಯಾರೂ ಇರಾನ್ ಜನರೊಂದಿಗೆ ಮಾತನಾಡಲು ಸಾಧ್ಯವಿಲ್ಲ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅಮೆರಿಕದೊಂದಿಗೆ ಮಾತುಕತೆಗಳಿಂದ ಫಲಿತಾಂಶ ಸಿಗುತ್ತದೆ ಎಂಬ ವಿಶ್ವಾಸವೇ ಇಲ್ಲ. ವಿಶ್ವಾಸದ ಮಟ್ಟ ಶೂನ್ಯವಾಗಿದೆ ಎಂದವರು ಹೇಳಿದ್ದಾರೆ.
ಭೂಯುದ್ಧದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, “ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಯಾವುದೇ ಭೂ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲೆವು ಎಂದಿದ್ದಾರೆ. ಅಲ್ಲದೆ, ನಮ್ಮ ಷರತ್ತುಗಳು ಸ್ಪಷ್ಟವಾಗಿವೆ. ನಾವು ಯುದ್ಧ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am