ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm