ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm