ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm