ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm