ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm