ಬ್ರೇಕಿಂಗ್ ನ್ಯೂಸ್
06-04-26 06:09 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ನವದೆಹಲಿ- ಟೆಲ್ ಅವೀವ್ ಮಾರ್ಗದಲ್ಲಿ ಮೇ 31ರ ವರೆಗೂ ವಿಮಾನ ಯಾನವನ್ನು ಸ್ಥಗಿತಗೊಳಿಸಿದೆ.
ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲಿ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ನಡುವೆಯೂ ಕಾರ್ಯ ನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮುಖ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನ ಸಂಚಾರ ಸ್ಥಗಿತ ಚಿಂತೆಗೀಡು ಮಾಡಿದೆ. ಇಸ್ರೇಲ್ ತೊರೆಯಲು ಬಯಸುವ ಭಾರತೀಯರು ಜೋರ್ಡಾನ್ ಅಥವಾ ಈಜಿಪ್ಟ್ ಮೂಲಕ ಎರಡು ದೇಶಗಳ ಭೂ ಗಡಿ ದಾಟುವ ಮೂಲಕ ಪ್ರವೇಶಿಸಬೇಕು. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವಿಧ ಮಾರ್ಗಗಳ ಮೂಲಕ ಭಾರತಕ್ಕೆ ತೆರಳಲು ನೆರವು ನೀಡುತ್ತಿದೆ. ಇದೇ ವೇಳೆ, ರಾಯಭಾರ ಕಚೇರಿ ಭಾರತೀಯ ಸಮುದಾಯದೊಂದಿಗೆ ನಿಯಮಿತ ಸಂಪರ್ಕವನ್ನು ಹೊಂದಿದ್ದು, 24x7 ತುರ್ತು ಸಹಾಯವಾಣಿ ತೆರೆದಿದೆ ಮತ್ತು ಬೃಹತ್ ನೋಂದಣಿ ಕಾರ್ಯವನ್ನು ಸಹ ಪ್ರಾರಂಭಿಸಿದೆ.
ಇದೇ ವೇಳೆ, ಭಾರತದ ಇಸ್ರೇಲ್ ರಾಯಭಾರಿ ಜೆಪಿ ಸಿಂಗ್ ಮತ್ತು ಸಿಬಂದಿ ಇಸ್ರೇಲ್ನಲ್ಲಿರುವ ಭಾರತೀಯರ ಸಮಸ್ಯೆ ಆಲಿಸಲು ವರ್ಚುವಲ್ ಚರ್ಚೆಯನ್ನು ನಡೆಸಿತು. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಅದರಾಚೆಗೂ ಅವರಿಗೆ ನಿರಂತರ ಬೆಂಬಲದ ಭರವಸೆ ನೀಡಿದೆ ಎಂದು ಮಿಷನ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm