ಬ್ರೇಕಿಂಗ್ ನ್ಯೂಸ್
07-04-26 08:01 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಎಪ್ರಿಲ್ 7: ಗಲ್ಫ್ ಯುದ್ಧದಿಂದಾಗಿ ಹಲವು ರಾಷ್ಟ್ರಗಳು ಪತರಗುಟ್ಟಿ ಹೋಗಿದ್ದು ಇಂಧನ ಪೂರೈಕೆ ಅವ್ಯವಸ್ಥೆಯಿಂದಾಗಿ ಪರ್ಯಾಯ ಚಿಂತನೆಯಲ್ಲಿ ತೊಡಗಿವೆ. ಇದೇ ವೇಳೆ, ಇಂಧನದ ಕಾರಣಕ್ಕೆ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಆಂಶಿಕ ಲಾಕ್ಡೌನ್ ಮಾಡಲು ಮುಂದಾಗಿದೆ. ಇದರಂತೆ, ರಾತ್ರಿ 8 ಗಂಟೆಗೆ ಎಲ್ಲಾ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ಮುಚ್ಚುವಂತೆ ಪಾಕಿಸ್ತಾನ ಸರ್ಕಾರ ಆದೇಶ ಹೊರಡಿಸಿದೆ.
ಯುದ್ಧದಿಂದ ಹೆಚ್ಚುತ್ತಿರುವ ಜಾಗತಿಕ ಇಂಧನ ವೆಚ್ಚಗಳನ್ನ ನಿರ್ವಹಿಸಲು ಸಾಧ್ಯವಾಗದೇ ಪಾಕಿಸ್ತಾನ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ರಾತ್ರಿ 8 ಗಂಟೆ ವರೆಗೂ ಮಾತ್ರ ಅಂಗಡಿ, ವ್ಯಾಪಾರಿ ಸಂಕೀರ್ಣಗಳನ್ನು ತೆರೆದಿಡುವಂತೆ ಆದೇಶ ಹೊರಡಿಸಿದೆ. ಭಾಗಶಃ ಲಾಕ್ಡೌನ್ ಅಡಿಯಲ್ಲಿ, ಮಾರುಕಟ್ಟೆಗಳು ಮತ್ತು ಮಾಲ್ಗಳು 8 ಗಂಟೆಗೆ, ರೆಸ್ಟೋರೆಂಟ್ಗಳು 10 ಗಂಟೆಗೆ ಮತ್ತು ಖಾಸಗಿ ಮದುವೆ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಗೆ ಬಂದ್ ಮಾಡಲು ಸೂಚಿಸಿದೆ. ಈಗಾಗಲೇ ಶಾಲೆಗಳನ್ನು ಒಂದು ತಿಂಗಳ ಕಾಲ ಬಂದ್ ಮಾಡಲಾಗಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಆದೇಶಗಳ ಪ್ರಕಾರ, ಖೈಬರ್ ಪಖ್ತುಂಖ್ವಾ, ಬಲೂಚಿಸ್ತಾನ್, ಇಸ್ಲಮಾಬಾದ್, ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಸರ್ಕಾರಿ ಮಳಿಗೆಗಳು ಮತ್ತು ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚಲು ಸೂಚಿಸಲಾಗಿದೆ. 8 ಗಂಟೆ ಬಳಿಕ ಯಾವುದೇ ಅಂಗಡಿ ತೆರೆಯುವಂತಿಲ್ಲ.
ನಿರ್ಬಂಧಗಳಿಂದ ವೈದ್ಯಕೀಯ ಸೌಲಭ್ಯ ಹಾಗೂ ಔಷಧಾಲಯಗಳಿಗೆ ವಿನಾಯಿತಿ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಗಳು ಬುಡಮೇಲಾಗಿದ್ದು ಜಾಗತಿಕವಾಗಿ ತೈಲ ಮತ್ತು ಇಂಧನ ಬೆಲೆಗಳು ಏರುತ್ತಿದೆ. ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ಇಂಧನ ಆಮದಿನ ಮೌಲ್ಯ ಒಟ್ಟು ಆಮದು ವಹಿವಾಟಿಗಿಂತ 22 ಶೇ. ಹೆಚ್ಚಿದೆ. ಹೀಗಾಗಿ ಭಾಗಶಃ ಲಾಕ್ಡೌನ್ ಕ್ರಮಗಳನ್ನು ಜಾರಿಗೊಳಿಸಿ ಪರೋಕ್ಷವಾಗಿ ಇಂಧನ ಬಳಕೆಯ ಮೇಲೆ ನಿಯಂತ್ರಣ ವಿಧಿಸಲು ಮುಂದಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm