ಬ್ರೇಕಿಂಗ್ ನ್ಯೂಸ್
07-04-26 08:01 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಎಪ್ರಿಲ್ 7: ಗಲ್ಫ್ ಯುದ್ಧದಿಂದಾಗಿ ಹಲವು ರಾಷ್ಟ್ರಗಳು ಪತರಗುಟ್ಟಿ ಹೋಗಿದ್ದು ಇಂಧನ ಪೂರೈಕೆ ಅವ್ಯವಸ್ಥೆಯಿಂದಾಗಿ ಪರ್ಯಾಯ ಚಿಂತನೆಯಲ್ಲಿ ತೊಡಗಿವೆ. ಇದೇ ವೇಳೆ, ಇಂಧನದ ಕಾರಣಕ್ಕೆ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಆಂಶಿಕ ಲಾಕ್ಡೌನ್ ಮಾಡಲು ಮುಂದಾಗಿದೆ. ಇದರಂತೆ, ರಾತ್ರಿ 8 ಗಂಟೆಗೆ ಎಲ್ಲಾ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ಮುಚ್ಚುವಂತೆ ಪಾಕಿಸ್ತಾನ ಸರ್ಕಾರ ಆದೇಶ ಹೊರಡಿಸಿದೆ.
ಯುದ್ಧದಿಂದ ಹೆಚ್ಚುತ್ತಿರುವ ಜಾಗತಿಕ ಇಂಧನ ವೆಚ್ಚಗಳನ್ನ ನಿರ್ವಹಿಸಲು ಸಾಧ್ಯವಾಗದೇ ಪಾಕಿಸ್ತಾನ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ರಾತ್ರಿ 8 ಗಂಟೆ ವರೆಗೂ ಮಾತ್ರ ಅಂಗಡಿ, ವ್ಯಾಪಾರಿ ಸಂಕೀರ್ಣಗಳನ್ನು ತೆರೆದಿಡುವಂತೆ ಆದೇಶ ಹೊರಡಿಸಿದೆ. ಭಾಗಶಃ ಲಾಕ್ಡೌನ್ ಅಡಿಯಲ್ಲಿ, ಮಾರುಕಟ್ಟೆಗಳು ಮತ್ತು ಮಾಲ್ಗಳು 8 ಗಂಟೆಗೆ, ರೆಸ್ಟೋರೆಂಟ್ಗಳು 10 ಗಂಟೆಗೆ ಮತ್ತು ಖಾಸಗಿ ಮದುವೆ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಗೆ ಬಂದ್ ಮಾಡಲು ಸೂಚಿಸಿದೆ. ಈಗಾಗಲೇ ಶಾಲೆಗಳನ್ನು ಒಂದು ತಿಂಗಳ ಕಾಲ ಬಂದ್ ಮಾಡಲಾಗಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಆದೇಶಗಳ ಪ್ರಕಾರ, ಖೈಬರ್ ಪಖ್ತುಂಖ್ವಾ, ಬಲೂಚಿಸ್ತಾನ್, ಇಸ್ಲಮಾಬಾದ್, ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಸರ್ಕಾರಿ ಮಳಿಗೆಗಳು ಮತ್ತು ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚಲು ಸೂಚಿಸಲಾಗಿದೆ. 8 ಗಂಟೆ ಬಳಿಕ ಯಾವುದೇ ಅಂಗಡಿ ತೆರೆಯುವಂತಿಲ್ಲ.
ನಿರ್ಬಂಧಗಳಿಂದ ವೈದ್ಯಕೀಯ ಸೌಲಭ್ಯ ಹಾಗೂ ಔಷಧಾಲಯಗಳಿಗೆ ವಿನಾಯಿತಿ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಗಳು ಬುಡಮೇಲಾಗಿದ್ದು ಜಾಗತಿಕವಾಗಿ ತೈಲ ಮತ್ತು ಇಂಧನ ಬೆಲೆಗಳು ಏರುತ್ತಿದೆ. ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ಇಂಧನ ಆಮದಿನ ಮೌಲ್ಯ ಒಟ್ಟು ಆಮದು ವಹಿವಾಟಿಗಿಂತ 22 ಶೇ. ಹೆಚ್ಚಿದೆ. ಹೀಗಾಗಿ ಭಾಗಶಃ ಲಾಕ್ಡೌನ್ ಕ್ರಮಗಳನ್ನು ಜಾರಿಗೊಳಿಸಿ ಪರೋಕ್ಷವಾಗಿ ಇಂಧನ ಬಳಕೆಯ ಮೇಲೆ ನಿಯಂತ್ರಣ ವಿಧಿಸಲು ಮುಂದಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am