ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am