ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm