ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm