ಬ್ರೇಕಿಂಗ್ ನ್ಯೂಸ್
09-04-26 07:43 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 9: ಮಧ್ಯಪ್ರಾಚ್ಯದಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಇರಾನ್ -ಅಮೆರಿಕ ಸಮ್ಮತಿಸಿದರೂ ಹರ್ಮುಜ್ ಜಲಸಂಧಿಯ ಬಿಕ್ಕಟ್ಟು ಏಷ್ಯನ್ ದೇಶಗಳಿಗೆ ದೊಡ್ಡದಾಗಿ ತಟ್ಟುವ ಭೀತಿ ಉಂಟಾಗಿದೆ. ಜಲಸಂಧಿಯಲ್ಲಿ ಹಾದು ಹೋಗುವ ಪ್ರತಿ ನೌಕೆಗೆ 2 ದಶಲಕ್ಷ ಡಾಲರ್ (ಸುಮಾರು 18 ಕೋಟಿ ರೂ.) ಟೋಲ್ ವಿಧಿಸುವುದಾಗಿ ಇರಾನ್ ಘೋಷಿಸಿದೆ. ಇದೇ ವೇಳೆ, ಅಮೆರಿಕವೂ ಸುಂಕದಲ್ಲಿ ಪಾಲು ಕೇಳಿದ್ದು ಯುದ್ಧ ನಷ್ಟ ಭರಿಸಿಕೊಳ್ಳಲು ಮುಂದಾಗಿದೆ.
ಯುದ್ಧದ ಸಮಯದಲ್ಲಿ ಭಾರತ ಸೇರಿದಂತೆ ಕೆಲವೇ ಮಿತ್ರ ದೇಶಗಳನ್ನು ಹೊರತುಪಡಿಸಿ ಹರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿತ್ತು. ಆದರೆ ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳಿಗೆ ಇದೇ ದೊಡ್ಡ ತಲೆನೋವಾಗಿತ್ತು. ಆನಂತರ, ಅಮೆರಿಕ ಮುಂದಿಟ್ಟ ಒಪ್ಪಂದದ ಷರತ್ತಿನಂತೆ ಹರ್ಮುಜ್ ಜಲಸಂಧಿಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲು ಇರಾನ್ ಒಪ್ಪಿದೆ. ಆದರೆ, ಟೋಲ್ ವಿಧಿಸುವ ಮೂಲಕ ಹಣ ಸಂಗ್ರಹಿಸಲಿದ್ದು, ಯುದ್ಧದಿಂದ ಉಂಟಾದ ನಷ್ಟ ಭರ್ತಿಗೆ ಇದು ಅನಿವಾರ್ಯ ಎಂದು ಹೇಳಿಕೊಂಡಿದೆ.
ಇರಾನ್ ಟೋಲ್ ಪ್ರಸ್ತಾಪಕ್ಕೆ ಭಾರತ, ಒಮಾನ್ ಸೇರಿದಂತೆ ಹೆಚ್ಚಿನ ದೇಶಗಳಿಂದ ವಿರೋಧವೂ ವ್ಯಕ್ತವಾಗಿದೆ. ಎಲ್ಲ ದೇಶಗಳಿಗೆ ಟೋಲ್ ವಿಧಿಸಿದರೆ ಭಾರತಕ್ಕೆ ಮಾತ್ರ ದುಬಾರಿಯಾಗಿ ಪರಿಣಮಿಸಲಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಟೋಲ್ ಪ್ರಸ್ತಾಪಕ್ಕೆ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ್ದು ಜೊತೆಗೆ ತನಗೂ ಪಾಲು ನೀಡುವಂತೆ ಕೇಳಿದ್ದಾರೆ.
ದಿನಕ್ಕೆ 200 ಕೋಟಿ ಹೊರೆ
ಹರ್ಮುಜ್ ವಿಷಯದಲ್ಲಿ ಇರಾನ್ ತನ್ನ ನಿಯಮವನ್ನು ಎಲ್ಲಾ ದೇಶಗಳಿಗೂ ಅನ್ವಯಿಸಿದರೆ, ಭಾರತಕ್ಕೆ ತೈಲ ಆಮದು ದುಬಾರಿಯಾಗಲಿದೆ. ಹರ್ಮುಜ್ ಮೂಲಕ ಇತರೆ ಸರಕುಗಳ ಸಾಗಣೆ ವೆಚ್ಚವೂ ದುಪ್ಪಟ್ಟಾಗಲಿದೆ. ಅಂದಾಜು ಭಾರತಕ್ಕೆ 200 ಕೋಟಿ ರೂ. ಹೊರೆಯಾಗಲಿದೆ. ಭಾರತದ ಶೇ. 50ರಷ್ಟು ಕಚ್ಚಾತೈಲ, 80% ಎಲ್ಪಿಜಿ ಹರ್ಮುಜ್ ಮೂಲಕವೇ ಬರುತ್ತಿದೆ. ನಿತ್ಯ 10-12 ಟ್ಯಾಂಕರ್ಗಳು ಜಲಸಂಧಿಯಿಂದ ಸಾಗುವುದರಿಂದ ದಿನಕ್ಕೆ ಪ್ರತಿ ನೌಕೆಗೆ 18 ಕೋಟಿ ರೂ.ನಂತೆ 180-200 ಕೋಟಿ ರೂ.ಟೋಲ್ ಭಾರ ಬೀಳಲಿದೆ. ಸಾಗಣೆ ವೆಚ್ಚದಲ್ಲಿ ಏರಿಕೆಯಿಂದಾಗಿ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಬೆಲೆಯ ಹೊರೆಯನ್ನು ಜನರ ಮೇಲೆ ಹೊರಿಸುವ ಸಾಧ್ಯತೆಯಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm