ಬ್ರೇಕಿಂಗ್ ನ್ಯೂಸ್
09-04-26 07:43 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 9: ಮಧ್ಯಪ್ರಾಚ್ಯದಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಇರಾನ್ -ಅಮೆರಿಕ ಸಮ್ಮತಿಸಿದರೂ ಹರ್ಮುಜ್ ಜಲಸಂಧಿಯ ಬಿಕ್ಕಟ್ಟು ಏಷ್ಯನ್ ದೇಶಗಳಿಗೆ ದೊಡ್ಡದಾಗಿ ತಟ್ಟುವ ಭೀತಿ ಉಂಟಾಗಿದೆ. ಜಲಸಂಧಿಯಲ್ಲಿ ಹಾದು ಹೋಗುವ ಪ್ರತಿ ನೌಕೆಗೆ 2 ದಶಲಕ್ಷ ಡಾಲರ್ (ಸುಮಾರು 18 ಕೋಟಿ ರೂ.) ಟೋಲ್ ವಿಧಿಸುವುದಾಗಿ ಇರಾನ್ ಘೋಷಿಸಿದೆ. ಇದೇ ವೇಳೆ, ಅಮೆರಿಕವೂ ಸುಂಕದಲ್ಲಿ ಪಾಲು ಕೇಳಿದ್ದು ಯುದ್ಧ ನಷ್ಟ ಭರಿಸಿಕೊಳ್ಳಲು ಮುಂದಾಗಿದೆ.
ಯುದ್ಧದ ಸಮಯದಲ್ಲಿ ಭಾರತ ಸೇರಿದಂತೆ ಕೆಲವೇ ಮಿತ್ರ ದೇಶಗಳನ್ನು ಹೊರತುಪಡಿಸಿ ಹರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿತ್ತು. ಆದರೆ ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳಿಗೆ ಇದೇ ದೊಡ್ಡ ತಲೆನೋವಾಗಿತ್ತು. ಆನಂತರ, ಅಮೆರಿಕ ಮುಂದಿಟ್ಟ ಒಪ್ಪಂದದ ಷರತ್ತಿನಂತೆ ಹರ್ಮುಜ್ ಜಲಸಂಧಿಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲು ಇರಾನ್ ಒಪ್ಪಿದೆ. ಆದರೆ, ಟೋಲ್ ವಿಧಿಸುವ ಮೂಲಕ ಹಣ ಸಂಗ್ರಹಿಸಲಿದ್ದು, ಯುದ್ಧದಿಂದ ಉಂಟಾದ ನಷ್ಟ ಭರ್ತಿಗೆ ಇದು ಅನಿವಾರ್ಯ ಎಂದು ಹೇಳಿಕೊಂಡಿದೆ.
ಇರಾನ್ ಟೋಲ್ ಪ್ರಸ್ತಾಪಕ್ಕೆ ಭಾರತ, ಒಮಾನ್ ಸೇರಿದಂತೆ ಹೆಚ್ಚಿನ ದೇಶಗಳಿಂದ ವಿರೋಧವೂ ವ್ಯಕ್ತವಾಗಿದೆ. ಎಲ್ಲ ದೇಶಗಳಿಗೆ ಟೋಲ್ ವಿಧಿಸಿದರೆ ಭಾರತಕ್ಕೆ ಮಾತ್ರ ದುಬಾರಿಯಾಗಿ ಪರಿಣಮಿಸಲಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಟೋಲ್ ಪ್ರಸ್ತಾಪಕ್ಕೆ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ್ದು ಜೊತೆಗೆ ತನಗೂ ಪಾಲು ನೀಡುವಂತೆ ಕೇಳಿದ್ದಾರೆ.
ದಿನಕ್ಕೆ 200 ಕೋಟಿ ಹೊರೆ
ಹರ್ಮುಜ್ ವಿಷಯದಲ್ಲಿ ಇರಾನ್ ತನ್ನ ನಿಯಮವನ್ನು ಎಲ್ಲಾ ದೇಶಗಳಿಗೂ ಅನ್ವಯಿಸಿದರೆ, ಭಾರತಕ್ಕೆ ತೈಲ ಆಮದು ದುಬಾರಿಯಾಗಲಿದೆ. ಹರ್ಮುಜ್ ಮೂಲಕ ಇತರೆ ಸರಕುಗಳ ಸಾಗಣೆ ವೆಚ್ಚವೂ ದುಪ್ಪಟ್ಟಾಗಲಿದೆ. ಅಂದಾಜು ಭಾರತಕ್ಕೆ 200 ಕೋಟಿ ರೂ. ಹೊರೆಯಾಗಲಿದೆ. ಭಾರತದ ಶೇ. 50ರಷ್ಟು ಕಚ್ಚಾತೈಲ, 80% ಎಲ್ಪಿಜಿ ಹರ್ಮುಜ್ ಮೂಲಕವೇ ಬರುತ್ತಿದೆ. ನಿತ್ಯ 10-12 ಟ್ಯಾಂಕರ್ಗಳು ಜಲಸಂಧಿಯಿಂದ ಸಾಗುವುದರಿಂದ ದಿನಕ್ಕೆ ಪ್ರತಿ ನೌಕೆಗೆ 18 ಕೋಟಿ ರೂ.ನಂತೆ 180-200 ಕೋಟಿ ರೂ.ಟೋಲ್ ಭಾರ ಬೀಳಲಿದೆ. ಸಾಗಣೆ ವೆಚ್ಚದಲ್ಲಿ ಏರಿಕೆಯಿಂದಾಗಿ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಬೆಲೆಯ ಹೊರೆಯನ್ನು ಜನರ ಮೇಲೆ ಹೊರಿಸುವ ಸಾಧ್ಯತೆಯಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am