ಬ್ರೇಕಿಂಗ್ ನ್ಯೂಸ್
10-04-26 11:05 pm HK News Staffer ದೇಶ - ವಿದೇಶ
ಟೆಲ್ ಅವೀವ್, ಎಪ್ರಿಲ್ 10: ಅಮೆರಿಕ - ಇರಾನ್ ಮಧ್ಯೆ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಪಾಕಿಸ್ತಾನ ವಿರುದ್ಧ ಇಸ್ರೇಲ್ ಕಿಡಿಕಾರಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಅವರು, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ದಾಳಿ ನಡೆಸಿದ್ದಕ್ಕೆ ಎಲ್ಲ ನಾಶವಾಗಲಿ, ಅದು ಕ್ಯಾನ್ಸರ್ ದೇಶ ಎಂದು ಟೀಕಿಸಿದ್ದಕ್ಕೆ ಇಸ್ರೇಲ್ ತೀವ್ರ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ಇಸ್ರೇಲ್ ವಿನಾಶಕ್ಕೆ ಪಾಕ್ ರಕ್ಷಣಾ ಸಚಿವರು ಕರೆ ನೀಡಿರುವುದು “ಅಸ್ವೀಕಾರಾರ್ಹ” ಎಂದು ಖಂಡಿಸಿದ್ದಾರೆ. ಯಾವುದೇ ದೇಶ ಅಥವಾ ಸರ್ಕಾರದಿಂದ ಇಂತಹ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಶಾಂತಿ ಮಧ್ಯಸ್ಥಿಕೆಯ ಪಾತ್ರ ವಹಿಸುವ ದೇಶ ಇಂತಹ ಪದ ಬಳಕೆ ಮಾಡುವುದು ಸರಿಯಲ್ಲ. ಇಸ್ರೇಲ್ ತನ್ನ ಭದ್ರತೆ ಮತ್ತು ಅಸ್ತಿತ್ವವನ್ನು ರಕ್ಷಿಸಿಕೊಳ್ಳಲು ಯಾವ ಕ್ರಮಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಗುಡುಗಿದ್ದಾರೆ.
ಇದಲ್ಲದೆ, ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕೂಡ ಪಾಕಿಸ್ತಾನದ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿದ್ದು ಇಂತಹ ಭಾಷೆ ದ್ವೇಷವನ್ನು ಉತ್ತೇಜಿಸುವಂತಾಗಿದೆ ಎಂದು ಹೇಳಿದ್ದಾರೆ. “ಕ್ಯಾನ್ಸರ್ ರಾಜ್ಯ” ಎಂಬ ಪದ ಬಳಕೆ ಇಸ್ರೇಲ್ನ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. ಶಾಂತಿ ಮಾತುಕತೆ ನಡೆಸುವ ದೇಶದ ಜವಾಬ್ದಾರಿಯುತ ಸಚಿವರು ಇಂತಹ ಭಾಷೆ ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಖವಾಜಾ ಆಸಿಫ್ ಇಸ್ರೇಲ್ ವಿರುದ್ಧ ಸಿಟ್ಟು ಹೊರಹಾಕುವುದು ಇದೇ ಮೊದಲೇನಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಮಾನವಕುಲದ ಅತ್ಯಂತ ದೊಡ್ಡ ಅಪರಾಧಿ. ಅಮೆರಿಕ ವೆನೆಜುವೆಲಾದ ಅಧ್ಯಕ್ಷರನ್ನು ಸೆರೆಹಿಡಿದಂತೆಯೇ ನೆತನ್ಯಾಹು ಅವರನ್ನು ಅಪಹರಿಸಿ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಅವರು ಈ ಹಿಂದೆ ಆಗ್ರಹಿಸಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm