ಬ್ರೇಕಿಂಗ್ ನ್ಯೂಸ್
13-04-26 10:35 pm HK News Staffer ದೇಶ - ವಿದೇಶ
ಮುಂಬೈ, ಎಪ್ರಿಲ್ 13: ಬಹುರಾಷ್ಟ್ರೀಯ ಕಂಪನಿ ಟಿಸಿಎಸ್ ನಲ್ಲಿ ಹೈಫೈ ಲವ್ ಜಿಹಾದ್, ಮತಾಂತರ, ಸೆಕ್ಸ್ ದಂಧೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದ್ದು ಮಹಾರಾಷ್ಟ್ರ ಪೊಲೀಸರು ಘಟನೆ ಸಂಬಂಧಿಸಿ 9 ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಕಂಪನಿಯ ಎಚ್ಆರ್ ಮ್ಯಾನೇಜರ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಟಿಸಿಎಸ್ ಕಂಪನಿಯ ನಾಸಿಕ್ ಕಚೇರಿಯಲ್ಲಿ ಇಂತಹ ಆರೋಪ ಕೇಳಿಬಂದಿದ್ದು, ಹಲವಾರು ಟೆಕ್ಕಿಗಳು ತಮ್ಮನ್ನು ಬೀಫ್ ತಿನ್ನುವಂತೆ ಪೀಡಿಸಿರುವುದು, ನಮಾಜ್ ಮಾಡುವಂತೆ ಒತ್ತಡ ಹೇರಿರುವುದು, ಸೆಕ್ಸ್ ದಂಧೆಗೆ ಬಳಸಿ ಮತಾಂತರಕ್ಕೆ ಯತ್ನಿಸಿರುವ ಬಗ್ಗೆ ಕಂಪನಿಯ ಹಿರಿಯ ಸಿಬಂದಿ ಬಗ್ಗೆ ಆರೋಪ ಮಾಡಿದ್ದಾರೆ. ಸಂಸ್ಥೆಯ ಉದ್ಯೋಗಿಗಳು ಹಿರಿಯ ಮುಸ್ಲಿಂ ಸಹೋದ್ಯೋಗಿಗಳು ನಡೆಸುತ್ತಿರುವ ಕಿರುಕುಳದ ಬಗ್ಗೆ ಪದೇ ಪದೇ ದೂರಿತ್ತಿದ್ದರೂ ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದಾನೆ. ಇದಕ್ಕಾಗಿ ಎಚ್ಆರ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಹೊಸತಾಗಿ ಕೆಲಸ ಕೇಳಿಕೊಂಡು ಬಂದ ಯುವತಿಯರನ್ನು ರಾಕೆಟ್ ಗೆ ಬಳಸುತ್ತಿದ್ದು, ಅವರನ್ನು ಕೆಲಸ ತೆಗೆಸಿಕೊಡುವ ಭರವಸೆ ಕೊಟ್ಟು ದುರ್ಬಳಕೆ ಮಾಡುತ್ತಿದ್ದರು. ಅಲ್ಲದೆ, ಅವರ ಫೋಟೋ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದರು. ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದು ಪದೇ ಪದೇ ಕೃತ್ಯ ಮರುಕಳಿಸಲು ಕಾರಣವಾಗಿದೆ. ಕೃತ್ಯದಲ್ಲಿ ಮಹಿಳಾ ಉದ್ಯೋಗಿಗಳು ಕೂಡ ತೊಡಗಿಸಿದ್ದು, ಕೃತ್ಯ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ ಎಂದು ಎಸಿಪಿ ಸಂದೀಪ್ ಮಿಟ್ಕೆ ತಿಳಿಸಿದ್ದಾರೆ.
ನಾಶಿಕ್ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್ ಲೈಂಗಿಕ ದೌರ್ಜನ್ಯ ವಿರೋಧಿ ಕಾಯ್ದೆಯಡಿ ತನಿಖೆಗೆ ಆದೇಶ ಮಾಡಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರಕಾರ ತನಿಖೆಗೆ ವಿಶೇಷ ತಂಡವನ್ನು ನೇಮಕ ಮಾಡಿದೆ. ವಿಷಯ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಹಿರಿಯ ಸಿಬಂದಿಯನ್ನು ಟಿಸಿಎಸ್ ಕಂಪನಿ ಕೆಲಸದಿಂದ ತೆಗೆದುಹಾಕಿದೆ.
ಕೆಲವು ಸೀನಿಯರ್ ಉದ್ಯೋಗಿಗಳು ಹೇಳುವ ಪ್ರಕಾರ, ಇಂತಹ ಸೆಕ್ಸ್ ದಂಧೆ ಎಲ್ಲ ಕಡೆಯೂ ಆಗುತ್ತದೆ, ಆದರೆ ಇಲ್ಲಿ ಮಹಿಳಾ ಉದ್ಯೋಗಿಗಳನ್ನು ಬೇರೆ ಬೇರೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಳ್ಳಲಾಗಿದೆ. ಆನಂತರ, ಅವರನ್ನು ಮತಾಂತರಕ್ಕೆ ಪೀಡಿಸಿದ್ದಾರೆ. ಹಿಂದು ದೇವರನ್ನು ನಿಂದಿಸಿ ಅಲ್ಲಾನೊಬ್ಬನೇ ದೇವರು ಎಂದು ಹೇಳುತ್ತ, ಅಲ್ಲಾನನ್ನು ಪೂಜಿಸಲು ಒತ್ತಾಯಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳಿದ್ದು, ಮಹಾರಾಷ್ಟ್ರ ಸರಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm