ಬ್ರೇಕಿಂಗ್ ನ್ಯೂಸ್
14-04-26 01:46 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏ 14: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕ್ಯಾಥೋಲಿಕ್ ಧರ್ಮಗುರು ಪೋಪ್ ಲಿಯೋ XIV ನಡುವೆ ವಾಕ್ಸಮರ ಆರಂಭವಾಗಿದ್ದು, ಇದು ಜಾಗತಿಕ ಹಾಗೂ ಧಾರ್ಮಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್ನಲ್ಲಿ, ಲಿಯೋ ಅವರನ್ನು “ಅಪರಾಧ ವಿಷಯದಲ್ಲಿ ದುರ್ಬಲ” ಹಾಗೂ “ವಿದೇಶಾಂಗ ನೀತಿಯಲ್ಲಿ ದುರ್ಬಲ” ಎಂದು ಟೀಕಿಸಿದ್ದಾರೆ. ಜೊತೆಗೆ, ಲಿಯೋ ಪೋಪ್ ಆಗಿ ಆಯ್ಕೆಯಾಗಲು ನನ್ನ ರಾಜಕೀಯ ಪ್ರಭಾವವೇ ಕಾರಣ. ನಾನು ಶ್ವೇತಭವನದಲ್ಲಿ ಇಲ್ಲದಿದ್ದರೆ, ಲಿಯೋ ವ್ಯಾಟಿಕನ್ನಲ್ಲಿ ಇರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಪೋಪ್ "ತೀವ್ರ ಎಡಪಂಥೀಯರ" ಪರವಾಗಿ ವರ್ತಿಸುತ್ತಿದ್ದಾರೆಂದು ಹೇಳಿರುವ ಅವರು, ಒಬ್ಬ ರಾಜಕಾರಣಿಯಂತೆ ವರ್ತಿಸುವುದನ್ನು ಬಿಟ್ಟು ಧರ್ಮಗುರುವಿನ ಕೆಲಸ ಮಾಡಲಿ ಎಂದು ಹೇಳಿದ್ದಾರೆ.
ನಾನು ಪೋಪ್ ಲಿಯೋ ಅಭಿಮಾನಿ ಅಲ್ಲ. ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲಿ ಎಂದು ಒಪ್ಪುವ ಪೋಪ್ ನನಗೆ ಬೇಡ ಎಂದು ಕಟುವಾಗಿ ಟೀಕಿಸಿದ್ದಾರೆ. ಇದೇ ವೇಳೆ ಅಮೆರಿಕಾ ಕೈಗೊಂಡ ಕ್ರಮಗಳನ್ನು ಸಮರ್ಥಿಸಿಕೊಂಡಿರುವ ಅವರು, ದೇಶದ ಭದ್ರತೆಗಾಗಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.
ಪೋಪ್ ಲಿಯೋ XIV ಅಮೆರಿಕ ಮೂಲದ ಮೊದಲ ಪೋಪ್ ಆಗಿದ್ದಾರೆ. ಅವರು ಯುದ್ಧದ ಜೊತೆಗೆ ವಲಸಿಗರ ಮೇಲಿನ ಅಮೆರಿಕದ ಕಠಿಣ ಕ್ರಮಗಳನ್ನು ಕೂಡ ವಿರೋಧಿಸುತ್ತಾ ಬಂದಿದ್ದಾರೆ. ಪೋಪ್ ಲಿಯೋ ಅವರ ಪ್ರಸ್ತುತದ ನಿಲುವು ಟ್ರಂಪ್ ಆಡಳಿತದ ಯುದ್ಧ ನೀತಿ ಹಾಗೂ ವಲಸೆ ನೀತಿಗಳಿಗೆ ವಿರುದ್ಧವಾಗಿದ್ದು, ಇದೇ ಕಾರಣದಿಂದ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ.
ಇನ್ನು ಟ್ರಂಪ್ ಅವರ ಆಡಳಿತದೊಂದಿಗೆ ಯಾವುದೇ ಮುಖಾಮುಖಿ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ನನಗಿಲ್ಲ ಎಂದು ಹೇಳಿರುವ ಪೋಪ್ 14ನೇ ಲಿಯೊ, ರಾಜಕೀಯ ಘರ್ಷಣೆಗಿಂತ ಆಧ್ಯಾತ್ಮಿಕ ವಕಾಲತ್ತಿಗೆ ಹೆಚ್ಚು ಬದ್ಧತೆ ಹೊಂದಿರುವುದಾಗಿ ಪುನರುಚ್ಚರಿಸಿದ್ದಾರೆ.
ಜಾಗತಿಕ ಸಾಮರಸ್ಯದ ಮೇಲೆ ಗಮನ ಕೇಂದ್ರೀಕರಿಸುವ ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದ ಅವರು, ನಾವು ಯಾವಾಗಲೂ ಶಾಂತಿಯನ್ನು ಹುಡುಕೋಣ, ಯುದ್ಧಗಳನ್ನು ಕೊನೆಗೊಳಿಸೋಣ. ನಾನು ಟ್ರಂಪ್ ಆಡಳಿತಕ್ಕೆ ಹೆದರುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.
‘ಯುದ್ಧ ವಿರೋಧಿಸಿ ನಾನು ಗಟ್ಟಿಯಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ಶಾಂತಿ ಮತ್ತು ರಾಷ್ಟ್ರಗಳ ನಡುವೆ ಬಹುಪಕ್ಷೀಯ ಸಂವಾದವನ್ನು ಉತ್ತೇಜಿಸಲು ಪ್ರಯತ್ನಿಸುತ್ತೇನೆ. ಇದರಿಂದ ಸಮಸ್ಯೆಗಳಿಗೆ ಸರಿಯಾದ ಪರಿಹಾರ ಕಂಡುಕೊಳ್ಳಬಹುದು’ ಎಂದಿದ್ದಾರೆ.
‘ಚರ್ಚ್ನ ಸಂದೇಶವು ಸುವಾರ್ತೆಯ ಸಂದೇಶವಾಗಿದೆ. ಶಾಂತಿ ಸ್ಥಾಪಿಸುವವರು ಧನ್ಯರು. ನನ್ನ ಪಾತ್ರವನ್ನು ನಾನು ರಾಜಕಾರಣಿಯ ಪಾತ್ರವೆಂದು ನೋಡುವುದಿಲ್ಲ. ಅವರೊಂದಿಗೆ (ಟ್ರಂಪ್) ಚರ್ಚೆಗೆ ಇಳಿಯಲು ನಾನು ಬಯಸುವುದಿಲ್ಲ. ಜಗತ್ತಿನಲ್ಲಿ ಈಗಾಗಲೇ ಅತೀ ಹೆಚ್ಚು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am