ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm