ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am