ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am