ಬ್ರೇಕಿಂಗ್ ನ್ಯೂಸ್
18-04-26 10:31 am HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 18: ಒಂದೂವರೆ ತಿಂಗಳಿನಿಂದ ಸಂಘರ್ಷದ ಕಾರಣಕ್ಕೆ ತೀವ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದ ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ‘ಎಕ್ಸ್’ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. “ಲೆಬನಾನ್–ಇಸ್ರೇಲ್ ಕದನ ವಿರಾಮದ ಉಳಿದ ಅವಧಿ ವರೆಗೆ (ಏಪ್ರಿಲ್ 27ರ ವರೆಗೆ) ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿರಲಿದೆ. ಹಡಗುಗಳು ಇರಾನ್ನ ಬಂದರು ಮತ್ತು ಕಡಲ ಸಂಸ್ಥೆ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲೇ ಸಂಚರಿಸಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆ ಕೆಲವು ದಿನಗಳಿಂದ ಗಣಿ ತೆರವು ಕಾರ್ಯಾಚರಣೆ ಮತ್ತು ಹಡಗುಗಳ ತಪಾಸಣೆ ಆರಂಭಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಪರಿಸ್ಥಿತಿ ಸುಧಾರಿಸಿದರೆ ನೌಕಾಯಾನದ ಸ್ವಾತಂತ್ರ್ಯವನ್ನು ಮರು ಸ್ಥಾಪಿಸಲು ತಾವು ಸಿದ್ಧರಿದ್ದೇವೆ ಎಂಬ ಸಂಕೇತವನ್ನು ರವಾನಿಸುವ ಉದ್ದೇಶ ಇರಾನ್ ನಿರ್ಧಾರದ ಹಿಂದಿದೆ ಎಂದು ಎನ್ನಲಾಗುತ್ತಿದೆ.
ಇದೇ ವೇಳೆ ಜಲಸಂಧಿಯಲ್ಲಿ ಶಾಂತಿ ಸ್ಥಾಪಿಸಲು ಫ್ರಾನ್ಸ್ ಮತ್ತು ಬ್ರಿಟನ್ ಮುಂದಾಗಿವೆ. ಸುಮಾರು 40 ದೇಶಗಳ ಮತ್ತೊಂದು ಬೃಹತ್ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಾಗಿ ಉಭಯ ರಾಷ್ಟ್ರಗಳು ಘೋಷಿಸಿವೆ. ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಮ್ಮತ ಮೂಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವು ಮತ್ತೆ ಮುಕ್ತವಾಗಿರುವುದರಿಂದ ಜಾಗತಿಕ ತೈಲ ಬೆಲೆಗಳಲ್ಲಿ ಉಂಟಾಗಬಹುದಾಗಿದ್ದ ಭಾರಿ ಏರಿಳಿತದ ಆತಂಕ ಸದ್ಯಕ್ಕೆ ದೂರವಾಗಿದೆ. ಏಪ್ರಿಲ್ 27ರ ವರೆಗೆ ಈ ಕದನ ವಿರಾಮ ಇರುವುದರಿಂದ, ಮುಂದಿನ ಹತ್ತು ದಿನಗಳಲ್ಲಿ ನಡೆಯಲಿರುವ ರಾಜತಾಂತ್ರಿಕ ಚರ್ಚೆಗಳು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಲಿವೆ ಎಂಬ ಆಶಯ ವ್ಯಕ್ತವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm