ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm