ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm