ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am