ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm