ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am