ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm