ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm