ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm