ಬ್ರೇಕಿಂಗ್ ನ್ಯೂಸ್
25-04-26 03:53 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 25: ರಾಜ್ಯಸಭೆಯಲ್ಲಿ ಆಪ್ ಪಕ್ಷದ ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಸೇರಿ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ಸದನದಲ್ಲಿ ಮೂರನೇ ಎರಡು ಬಹುಮತ ಸಾಧಿಸಲು ಮತ್ತಷ್ಟು ಹತ್ತಿರವಾಗಿದೆ. ಸಂವಿಧಾನ ತಿದ್ದುಪಡಿಯಂತಹ ಮಸೂದೆಗಳನ್ನು ಅಂಗೀಕರಿಸಲು ಈ ಬಹುಮತ ಸದನದಲ್ಲಿ ಅಗತ್ಯವಾಗಿರುತ್ತದೆ.
ಸದ್ಯಕ್ಕೆ, ಮೇಲ್ಮನೆಯಲ್ಲಿ ಆ ‘ಮ್ಯಾಜಿಕ್ ಸಂಖ್ಯೆ’ ತಲುಪಲು ಮೈತ್ರಿಕೂಟಕ್ಕೆ ಇನ್ನೂ 17 ಸದಸ್ಯರ ಕೊರತೆಯಿದೆ. ಆಮ್ ಆದ್ಮಿ ಪಕ್ಷದ ಸಂಸದರು ಪಕ್ಷ ತೊರೆದ ನಂತರ, ರಾಜ್ಯಸಭೆಯಲ್ಲಿ ಎನ್ ಡಿಎಗೆ ಈಗ 145 ಸದಸ್ಯರ ಬೆಂಬಲ ಸಿಕ್ಕಂತಾಗಿದೆ. 244 ಸದಸ್ಯ ಬಲದ ರಾಜ್ಯಸಭೆಯಲ್ಲಿ ಮೂರನೇ ಎರಡು ಬಹುಮತದ ಗಡಿ 163 ಆಗಿರುತ್ತದೆ.
ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಬಿಜೆಪಿಗೆ ಸರಳ ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಕೊರತೆಯಿದೆ. ಇದು ಪಕ್ಷಕ್ಕೆ ಸವಾಲಾಗಿದೆ. ರಾಜ್ಯಸಭೆ ಅಧ್ಯಕ್ಷರಾದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಆಪ್ ಸಂಸದರನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಅನುಮೋದಿಸಿದರೆ ಆಡಳಿತ ಪಕ್ಷದ ಒಟ್ಟು ಸಂಸದರ ಸಂಖ್ಯೆ 113ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ ಬಿಜೆಪಿಗೆ 106 ಸಂಸದರು ಇದ್ದಾರೆ.
ಇದೇ ವೇಳೆ, ಏಳು ನಾಮನಿರ್ದೇಶಿತ ಸದಸ್ಯರು ಮತ್ತು ಇಬ್ಬರು ಸ್ವತಂತ್ರ ಸಂಸದರಿಂದಲೂ ಬೆಂಬಲ ಸಿಗುವ ಸಾಧ್ಯತೆ ಇದ್ದು, ಇದರಿಂದ ಬಿಜೆಪಿ ಬೆಂಬಲಿಸುವವರ ಸಂಖ್ಯೆ 122ಕ್ಕೆ ಏರಿಕೆಯಾಗಲಿದೆ. ಇದು ಸರಳ ಬಹುಮತದ ಅರ್ಧ ಗಡಿಯನ್ನು ತಲುಪುತ್ತದೆ. ಈಗ ಆಪ್ ಸಂಸದರು ಕೂಡ ಬಿಜೆಪಿ ಜೊತೆಗೆ ಸೇರಿಕೊಂಡಿದ್ದರಿಂದ ಎನ್ ಡಿಎ ಬಲ ಹೆಚ್ಚಲಿದೆ.
ಮೇಲ್ಮನೆಯಲ್ಲಿ NDAಗೆ ಮೂರನೇ ಎರಡರಷ್ಟು ಬಹುಮತ ದೊರಕಿದರೆ, ಸಂವಿಧಾನ ತಿದ್ದುಪಡಿ ಅಗತ್ಯವಿರುವ ಪ್ರಮುಖ ಮಸೂದೆಗಳನ್ನು ಅಂಗೀಕರಿಸುವುದು ಸುಲಭವಾಗುತ್ತದೆ. ಲೋಕಸಭೆಯಲ್ಲಿ NDAಗೆ ಸರಳ ಬಹುಮತ ಇದೆ. ಆದರೆ ಪ್ರಮುಖ ತಿದ್ದುಪಡಿಗಳಿಗೆ 363 ಸಂಸದರ ಬೆಂಬಲ ಬೇಕಾಗುತ್ತದೆ.
ಇತ್ತೀಚೆಗೆ, 2029ರಿಂದ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಜಾರಿಗೆ ತರುವ ಹಾಗೂ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಉದ್ದೇಶದ ಮಹತ್ವದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಲೋಕಸಭೆಯಲ್ಲಿ NDAಗೆ ಮೂರನೇ ಎರಡು ಬಹುಮತ ದೊರಕದ ಕಾರಣ ಸೋಲಾಗಿತ್ತು. ಪ್ರಸ್ತುತ NDA ಸರ್ಕಾರದ ಅವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಸಂಖ್ಯೆ ಕೊರತೆಯಿಂದ ಸೋತಿರುವುದು ಇದೇ ಮೊದಲ ಬಾರಿಯಾಗಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm