ಬ್ರೇಕಿಂಗ್ ನ್ಯೂಸ್
25-04-26 03:54 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 25: ರಾಜ್ಯಸಭೆಯಲ್ಲಿ ಆಪ್ ಪಕ್ಷದ ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಸೇರಿ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ಸದನದಲ್ಲಿ ಮೂರನೇ ಎರಡು ಬಹುಮತ ಸಾಧಿಸಲು ಮತ್ತಷ್ಟು ಹತ್ತಿರವಾಗಿದೆ. ಸಂವಿಧಾನ ತಿದ್ದುಪಡಿಯಂತಹ ಮಸೂದೆಗಳನ್ನು ಅಂಗೀಕರಿಸಲು ಈ ಬಹುಮತ ಸದನದಲ್ಲಿ ಅಗತ್ಯವಾಗಿರುತ್ತದೆ.
ಸದ್ಯಕ್ಕೆ, ಮೇಲ್ಮನೆಯಲ್ಲಿ ಆ ‘ಮ್ಯಾಜಿಕ್ ಸಂಖ್ಯೆ’ ತಲುಪಲು ಮೈತ್ರಿಕೂಟಕ್ಕೆ ಇನ್ನೂ 17 ಸದಸ್ಯರ ಕೊರತೆಯಿದೆ. ಆಮ್ ಆದ್ಮಿ ಪಕ್ಷದ ಸಂಸದರು ಪಕ್ಷ ತೊರೆದ ನಂತರ, ರಾಜ್ಯಸಭೆಯಲ್ಲಿ ಎನ್ ಡಿಎಗೆ ಈಗ 145 ಸದಸ್ಯರ ಬೆಂಬಲ ಸಿಕ್ಕಂತಾಗಿದೆ. 244 ಸದಸ್ಯ ಬಲದ ರಾಜ್ಯಸಭೆಯಲ್ಲಿ ಮೂರನೇ ಎರಡು ಬಹುಮತದ ಗಡಿ 163 ಆಗಿರುತ್ತದೆ.
ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಬಿಜೆಪಿಗೆ ಸರಳ ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಕೊರತೆಯಿದೆ. ಇದು ಪಕ್ಷಕ್ಕೆ ಸವಾಲಾಗಿದೆ. ರಾಜ್ಯಸಭೆ ಅಧ್ಯಕ್ಷರಾದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಆಪ್ ಸಂಸದರನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಅನುಮೋದಿಸಿದರೆ ಆಡಳಿತ ಪಕ್ಷದ ಒಟ್ಟು ಸಂಸದರ ಸಂಖ್ಯೆ 113ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ ಬಿಜೆಪಿಗೆ 106 ಸಂಸದರು ಇದ್ದಾರೆ.
ಇದೇ ವೇಳೆ, ಏಳು ನಾಮನಿರ್ದೇಶಿತ ಸದಸ್ಯರು ಮತ್ತು ಇಬ್ಬರು ಸ್ವತಂತ್ರ ಸಂಸದರಿಂದಲೂ ಬೆಂಬಲ ಸಿಗುವ ಸಾಧ್ಯತೆ ಇದ್ದು, ಇದರಿಂದ ಬಿಜೆಪಿ ಬೆಂಬಲಿಸುವವರ ಸಂಖ್ಯೆ 122ಕ್ಕೆ ಏರಿಕೆಯಾಗಲಿದೆ. ಇದು ಸರಳ ಬಹುಮತದ ಅರ್ಧ ಗಡಿಯನ್ನು ತಲುಪುತ್ತದೆ. ಈಗ ಆಪ್ ಸಂಸದರು ಕೂಡ ಬಿಜೆಪಿ ಜೊತೆಗೆ ಸೇರಿಕೊಂಡಿದ್ದರಿಂದ ಎನ್ ಡಿಎ ಬಲ ಹೆಚ್ಚಲಿದೆ.
ಮೇಲ್ಮನೆಯಲ್ಲಿ NDAಗೆ ಮೂರನೇ ಎರಡರಷ್ಟು ಬಹುಮತ ದೊರಕಿದರೆ, ಸಂವಿಧಾನ ತಿದ್ದುಪಡಿ ಅಗತ್ಯವಿರುವ ಪ್ರಮುಖ ಮಸೂದೆಗಳನ್ನು ಅಂಗೀಕರಿಸುವುದು ಸುಲಭವಾಗುತ್ತದೆ. ಲೋಕಸಭೆಯಲ್ಲಿ NDAಗೆ ಸರಳ ಬಹುಮತ ಇದೆ. ಆದರೆ ಪ್ರಮುಖ ತಿದ್ದುಪಡಿಗಳಿಗೆ 363 ಸಂಸದರ ಬೆಂಬಲ ಬೇಕಾಗುತ್ತದೆ.
ಇತ್ತೀಚೆಗೆ, 2029ರಿಂದ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಜಾರಿಗೆ ತರುವ ಹಾಗೂ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಉದ್ದೇಶದ ಮಹತ್ವದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಲೋಕಸಭೆಯಲ್ಲಿ NDAಗೆ ಮೂರನೇ ಎರಡು ಬಹುಮತ ದೊರಕದ ಕಾರಣ ಸೋಲಾಗಿತ್ತು. ಪ್ರಸ್ತುತ NDA ಸರ್ಕಾರದ ಅವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಸಂಖ್ಯೆ ಕೊರತೆಯಿಂದ ಸೋತಿರುವುದು ಇದೇ ಮೊದಲ ಬಾರಿಯಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm