ಬ್ರೇಕಿಂಗ್ ನ್ಯೂಸ್
26-04-26 12:49 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್ನ ಶ್ವೇತಭವನದ ವಾರ್ಷಿಕ ವರದಿಗಾರರ ಭೋಜನಕೂಟದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಕ್ಷಣಾರ್ಧದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಶ್ವೇತಭವನ ಸಮೀಪದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣಕ್ಕೆ ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ ಹೊರಭಾಗದಲ್ಲಿ 5ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ತಕ್ಷಣವೇ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಅಧ್ಯಕ್ಷರನ್ನು ಹಾಗೂ ಗಣ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಆ ವೇಳೆ ಸಭಾಂಗಣದಲ್ಲಿ ಇದ್ದ ನೂರಾರು ಪತ್ರಕರ್ತರು, ಸೆಲೆಬ್ರಿಟಿಗಳು ಹಾಗೂ ಅತಿಥಿಗಳು ಭೀತಿಯಿಂದ ಟೇಬಲ್ಗಳ ಕೆಳಗೆ ಅಡಗಿ ಕುಳಿತರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಕೂಡ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಿ, ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಶಂಕಿತನ ಬಂಧನ:
ಗುಂಡಿನ ಸದ್ದು ಕೇಳಿಬಂದ ತಕ್ಷಣ ಭದ್ರತಾ ಪಡೆಗಳು ಒಬ್ಬ ಶಂಕಿತನನ್ನು ಬಂಧಿಸಿದ್ದು, ಘಟನೆಯ ಕುರಿತು ಸವಿಸ್ತಾರ ತನಿಖೆ ಆರಂಭವಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಟ್ರಂಪ್ ಪ್ರತಿಕ್ರಿಯೆ:
ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಡೊನಾಲ್ಡ್ ಟ್ರಂಪ್, ಭದ್ರತಾ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. “ಇದು ವಿಚಿತ್ರ ಸಂಜೆ. ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕಾರ್ಯನಿರ್ವಹಿಸಿದೆ. ಶೂಟರ್ ಬಂಧನವಾಗಿದೆ. ಕಾರ್ಯಕ್ರಮ ಮುಂದುವರಿಸುವ ಕುರಿತು ಅಧಿಕಾರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.
ಈ ಘಟನೆ 2024ರಲ್ಲಿ ಪೆನ್ಸಿಲ್ವೇನಿಯಾದಲ್ಲಿ ನಡೆದ ಹತ್ಯೆ ಯತ್ನದ ನೆನಪುಗಳನ್ನು ಮರುಕಳಿಸಿದ್ದು, ಅಮೆರಿಕದ ಉನ್ನತ ನಾಯಕರ ಭದ್ರತೆ ಕುರಿತು ಮತ್ತೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ವಿಶ್ವದ ಅತಿ ಶಕ್ತಿಶಾಲಿ ದೇಶದ ಹೃದಯದಲ್ಲೇ ಗುಂಡಿನ ಸದ್ದು ಕೇಳಿ ಬಂದಿದ್ದು, ಭದ್ರತಾ ವ್ಯವಸ್ಥೆ ಎಷ್ಟು ಬಲಿಷ್ಠವಾದರೂ, ಅಪಾಯದ ನೆರಳು ಇನ್ನೂ ಹತ್ತಿರದಲ್ಲೇ ಇದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am