ಬ್ರೇಕಿಂಗ್ ನ್ಯೂಸ್
26-04-26 12:49 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್ನ ಶ್ವೇತಭವನದ ವಾರ್ಷಿಕ ವರದಿಗಾರರ ಭೋಜನಕೂಟದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಕ್ಷಣಾರ್ಧದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಶ್ವೇತಭವನ ಸಮೀಪದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣಕ್ಕೆ ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ ಹೊರಭಾಗದಲ್ಲಿ 5ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ತಕ್ಷಣವೇ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಅಧ್ಯಕ್ಷರನ್ನು ಹಾಗೂ ಗಣ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಆ ವೇಳೆ ಸಭಾಂಗಣದಲ್ಲಿ ಇದ್ದ ನೂರಾರು ಪತ್ರಕರ್ತರು, ಸೆಲೆಬ್ರಿಟಿಗಳು ಹಾಗೂ ಅತಿಥಿಗಳು ಭೀತಿಯಿಂದ ಟೇಬಲ್ಗಳ ಕೆಳಗೆ ಅಡಗಿ ಕುಳಿತರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಕೂಡ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಿ, ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಶಂಕಿತನ ಬಂಧನ:
ಗುಂಡಿನ ಸದ್ದು ಕೇಳಿಬಂದ ತಕ್ಷಣ ಭದ್ರತಾ ಪಡೆಗಳು ಒಬ್ಬ ಶಂಕಿತನನ್ನು ಬಂಧಿಸಿದ್ದು, ಘಟನೆಯ ಕುರಿತು ಸವಿಸ್ತಾರ ತನಿಖೆ ಆರಂಭವಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಟ್ರಂಪ್ ಪ್ರತಿಕ್ರಿಯೆ:
ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಡೊನಾಲ್ಡ್ ಟ್ರಂಪ್, ಭದ್ರತಾ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. “ಇದು ವಿಚಿತ್ರ ಸಂಜೆ. ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕಾರ್ಯನಿರ್ವಹಿಸಿದೆ. ಶೂಟರ್ ಬಂಧನವಾಗಿದೆ. ಕಾರ್ಯಕ್ರಮ ಮುಂದುವರಿಸುವ ಕುರಿತು ಅಧಿಕಾರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.
ಈ ಘಟನೆ 2024ರಲ್ಲಿ ಪೆನ್ಸಿಲ್ವೇನಿಯಾದಲ್ಲಿ ನಡೆದ ಹತ್ಯೆ ಯತ್ನದ ನೆನಪುಗಳನ್ನು ಮರುಕಳಿಸಿದ್ದು, ಅಮೆರಿಕದ ಉನ್ನತ ನಾಯಕರ ಭದ್ರತೆ ಕುರಿತು ಮತ್ತೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ವಿಶ್ವದ ಅತಿ ಶಕ್ತಿಶಾಲಿ ದೇಶದ ಹೃದಯದಲ್ಲೇ ಗುಂಡಿನ ಸದ್ದು ಕೇಳಿ ಬಂದಿದ್ದು, ಭದ್ರತಾ ವ್ಯವಸ್ಥೆ ಎಷ್ಟು ಬಲಿಷ್ಠವಾದರೂ, ಅಪಾಯದ ನೆರಳು ಇನ್ನೂ ಹತ್ತಿರದಲ್ಲೇ ಇದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm