ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am