ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm