ಬ್ರೇಕಿಂಗ್ ನ್ಯೂಸ್
04-05-26 01:16 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಸ್ಪಷ್ಟ ಬಹುಮತ ಪಡೆಯುವತ್ತ ಮುನ್ನುಗ್ಗಿದೆ. 12 ಗಂಟೆ ವೇಳೆಗೆ, ಬಿಜೆಪಿ 182 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಸಿಎಂ ಮಮತಾ ದೀದಿ ಕೋಟೆಯನ್ನು ಪುಡಿ ಮಾಡಿದೆ.
ಮೂರು ಬಾರಿಯ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು ಒಂದಂಕಿ ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಸ್ಥಾನಗಳಿದ್ದು 148 ಬಹುಮತದ ಮ್ಯಾಜಿಕ್ ನಂಬರ್ ಆಗಿದೆ.
2021 ರಲ್ಲಿ ತೃಣಮೂಲ ಕಾಂಗ್ರೆಸ್ 215 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದರೆ, ಬಿಜೆಪಿ 77 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್, ಸಿಪಿಎಂ ಶೂನ್ಯ ಸಾಧನೆ ಮಾಡಿತ್ತು. ಸಿಎಂ ಮಮತಾ ಬ್ಯಾನರ್ಜಿ ಆ ಸಂದರ್ಭದಲ್ಲಿ ನಂದಿಗ್ರಾಮದಲ್ಲಿ ಸೋತು ಬಳಿಕ ಭವಾನಿಪುರ್ ನಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಮತಪಟ್ಟಿ ಪರಿಷ್ಕರಣೆ ಬಳಿಕ ಎಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ದಾಖಲೆ ಎನ್ನುವಂತೆ 92.8 ಶೇ. ಮತ್ತು 91.47 ಶೇ. ವೋಟಿಂಗ್ ಆಗಿತ್ತು. ಎಕ್ಸಿಟ್ ಪೋಲ್ ನಲ್ಲಿ ಹೆಚ್ಚಿನ ಸಮೀಕ್ಷೆಗಳಲ್ಲಿ ಈ ಬಾರಿ ಬಿಜೆಪಿ ಗೆಲ್ಲುವ ಭವಿಷ್ಯ ಬಂದಿತ್ತು. ಆದರೆ ಚುನಾವಣಾ ವಿಶ್ಲೇಷಕರು ಬಿಜೆಪಿ ಗೆಲುವಿನ ಬಗ್ಗೆ ಸಂಶಯ ಹೊಂದಿದ್ದರು. ಯಾಕಂದ್ರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೇಸ್ ಇರಲಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಆನಂತರ ಸಿಪಿಎಂ ಅಧಿಕಾರದಲ್ಲಿತ್ತು.
ಎಡರಂಗದ ಸುದೀರ್ಘ 25 ವರ್ಷಗಳ ಆಡಳಿತದ ಬಳಿಕ ಕಾಂಗ್ರೆಸನ್ನು ಒಡೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿ ಮಮತಾ ಬ್ಯಾನರ್ಜಿ ಅಧಿಕಾರ ಹಿಡಿದಿದ್ದರು. ನಂದಿಗ್ರಾಮದ ರೈತ ಹೋರಾಟ ಮಮತಾಗೆ ಸ್ಟಾರ್ ಪಟ್ಟ ಕೊಟ್ಟಿದ್ದು ರಾಜ್ಯದ ಗದ್ದುಗೆಯತ್ತ ಒಯ್ದಿತ್ತು. ಆದರೆ ಅಲ್ಪಸಂಖ್ಯಾತರ ಅತಿಯಾದ ಓಲೈಕೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಮೃದು ಧೋರಣೆ ತಾಳಿದ್ದು ಈಗ ಮತದಾರರಿಂದ ತಪರಾಕಿ ಅನುಭವಿಸುವಂತಾಗಿದೆ. ಇದನ್ನೇ ಚುನಾವಣಾ ವಿಷಯವಾಗಿಸಿದ ಬಿಜೆಪಿಯನ್ನು ಮತದಾರ ಈಗ ಕೈಹಿಡಿದು ಮೇಲೆತ್ತಿದ್ದಾನೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am