ಬ್ರೇಕಿಂಗ್ ನ್ಯೂಸ್
04-05-26 01:16 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಸ್ಪಷ್ಟ ಬಹುಮತ ಪಡೆಯುವತ್ತ ಮುನ್ನುಗ್ಗಿದೆ. 12 ಗಂಟೆ ವೇಳೆಗೆ, ಬಿಜೆಪಿ 182 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಸಿಎಂ ಮಮತಾ ದೀದಿ ಕೋಟೆಯನ್ನು ಪುಡಿ ಮಾಡಿದೆ.
ಮೂರು ಬಾರಿಯ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು ಒಂದಂಕಿ ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಸ್ಥಾನಗಳಿದ್ದು 148 ಬಹುಮತದ ಮ್ಯಾಜಿಕ್ ನಂಬರ್ ಆಗಿದೆ.
2021 ರಲ್ಲಿ ತೃಣಮೂಲ ಕಾಂಗ್ರೆಸ್ 215 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದರೆ, ಬಿಜೆಪಿ 77 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್, ಸಿಪಿಎಂ ಶೂನ್ಯ ಸಾಧನೆ ಮಾಡಿತ್ತು. ಸಿಎಂ ಮಮತಾ ಬ್ಯಾನರ್ಜಿ ಆ ಸಂದರ್ಭದಲ್ಲಿ ನಂದಿಗ್ರಾಮದಲ್ಲಿ ಸೋತು ಬಳಿಕ ಭವಾನಿಪುರ್ ನಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಮತಪಟ್ಟಿ ಪರಿಷ್ಕರಣೆ ಬಳಿಕ ಎಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ದಾಖಲೆ ಎನ್ನುವಂತೆ 92.8 ಶೇ. ಮತ್ತು 91.47 ಶೇ. ವೋಟಿಂಗ್ ಆಗಿತ್ತು. ಎಕ್ಸಿಟ್ ಪೋಲ್ ನಲ್ಲಿ ಹೆಚ್ಚಿನ ಸಮೀಕ್ಷೆಗಳಲ್ಲಿ ಈ ಬಾರಿ ಬಿಜೆಪಿ ಗೆಲ್ಲುವ ಭವಿಷ್ಯ ಬಂದಿತ್ತು. ಆದರೆ ಚುನಾವಣಾ ವಿಶ್ಲೇಷಕರು ಬಿಜೆಪಿ ಗೆಲುವಿನ ಬಗ್ಗೆ ಸಂಶಯ ಹೊಂದಿದ್ದರು. ಯಾಕಂದ್ರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೇಸ್ ಇರಲಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಆನಂತರ ಸಿಪಿಎಂ ಅಧಿಕಾರದಲ್ಲಿತ್ತು.
ಎಡರಂಗದ ಸುದೀರ್ಘ 25 ವರ್ಷಗಳ ಆಡಳಿತದ ಬಳಿಕ ಕಾಂಗ್ರೆಸನ್ನು ಒಡೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿ ಮಮತಾ ಬ್ಯಾನರ್ಜಿ ಅಧಿಕಾರ ಹಿಡಿದಿದ್ದರು. ನಂದಿಗ್ರಾಮದ ರೈತ ಹೋರಾಟ ಮಮತಾಗೆ ಸ್ಟಾರ್ ಪಟ್ಟ ಕೊಟ್ಟಿದ್ದು ರಾಜ್ಯದ ಗದ್ದುಗೆಯತ್ತ ಒಯ್ದಿತ್ತು. ಆದರೆ ಅಲ್ಪಸಂಖ್ಯಾತರ ಅತಿಯಾದ ಓಲೈಕೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಮೃದು ಧೋರಣೆ ತಾಳಿದ್ದು ಈಗ ಮತದಾರರಿಂದ ತಪರಾಕಿ ಅನುಭವಿಸುವಂತಾಗಿದೆ. ಇದನ್ನೇ ಚುನಾವಣಾ ವಿಷಯವಾಗಿಸಿದ ಬಿಜೆಪಿಯನ್ನು ಮತದಾರ ಈಗ ಕೈಹಿಡಿದು ಮೇಲೆತ್ತಿದ್ದಾನೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm