ಬ್ರೇಕಿಂಗ್ ನ್ಯೂಸ್
04-05-26 07:04 pm HK News Staffer ದೇಶ - ವಿದೇಶ
ತಿರುವನಂತಪುರಂ, ಮೇ 4: ಕೇರಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಮೂರು ಅಸೆಂಬ್ಲಿ ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ರಾಜಧಾನಿ ತಿರುವನಂತಪುರಂ ಜಿಲ್ಲೆಯ ನೆಮ್ಮಾಮ್, ಕಜಕ್ಕೂಟ್ಟಮ್, ಚಾತನೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಸಿಪಿಎಂ ಅಭ್ಯರ್ಥಿ, ಹಾಲಿ ಸಚಿವ ಶಿವನ್ ಕುಟ್ಟಿ ಅವರನ್ನು 3500 ಮತಗಳಿಂದ ಸೋಲಿಸಿ ಶಾಸಕರಾಗಿದ್ದಾರೆ. ತಿರುವನಂತಪುರಂ ಜಿಲ್ಲೆಯ ಮತ್ತೊಂದು ಕ್ಷೇತ್ರ ಕಜಕ್ಕೂಟ್ಟಂನಲ್ಲಿ ಮಾಜಿ ಕೇಂದ್ರ ಸಚಿವ ಮುರಳೀಧರನ್ ಗೆಲುವು ಸಾಧಿಸಿದ್ದು ಸಿಪಿಎಂ ಅಭ್ಯರ್ಥಿ ಕಡಕಂಪಳ್ಳಿ ಸುರೇಂದ್ರನ್ ಅವರನ್ನು ಅಲ್ಪ ಮತಗಳಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.
ಅದೇ ಜಿಲ್ಲೆಯ ಚಾತನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಬಿ ಗೋಪಕುಮಾರ್ 4300 ಮತಗಳಿಂದ ಸಿಪಿಎಂ ಅಭ್ಯರ್ಥಿ ರಾಜೇಂದ್ರನ್ ಅವರನ್ನು ಸೋಲಿಸಿ ಇತಿಹಾಸ ನಿರ್ಮಿಸಿದ್ದಾರೆ. 2016ರಲ್ಲಿ ಓ ರಾಜಗೋಪಾಲ್ ನೆಮ್ಮಾಮ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದು ಬಿಟ್ಟರೆ ಬಿಜೆಪಿ ಬೇರಾವುದೇ ಶಾಸಕ ಸ್ಥಾನ ಗೆದ್ದಿರಲಿಲ್ಲ. ಇದೇ ಮೊದಲ ಬಾರಿಗೆ ಒಂದಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದು ಬಿಜೆಪಿ ಗೆಲುವಿನ ನಗೆ ಬೀರಿದೆ.
ಪಾಲಕ್ಕಾಡ್ ನಲ್ಲಿ ಶೋಭಾ ಸುರೇಂದ್ರನ್ ಖಾತೆ ತೆರೆಯುವ ಲಕ್ಷಣ ಇದ್ದರೂ, ಕಾಂಗ್ರೆಸಿನ ರಮೇಶ್ ಪಿಶರೋಡಿ ಮುಂದೆ ಸೋಲನುಭವಿಸಿದ್ದಾರೆ. ತ್ರಿಶೂರ್ ಜಿಲ್ಲೆಯಲ್ಲಿ ಸುರೇಶ್ ಗೋಪಿ ಸಂಸದನಾಗಿದ್ದರೂ ಅಲ್ಲಿನ ಅಸೆಂಬ್ಲಿ ಕ್ಷೇತ್ರದಲ್ಲಿ ಪದ್ಮಜಾ ವೇಣುಗೋಪಾಲ್ ಗೆ ಗೆಲುವು ದಕ್ಕಲಿಲ್ಲ. ವಿಶ್ವಾಸ ಮೂಡಿಸಿದ್ದ ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರು ಕೊಟ್ಟಾಯಂ ಜಿಲ್ಲೆಯ ಕಂಜಿರಪಳ್ಳಿ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ನೂರು ಸೀಟು ಗೆಲ್ಲುವ ಮೂಲಕ ಹತ್ತು ವರ್ಷಗಳ ಬಳಿಕ ಕೇರಳದಲ್ಲಿ ಅಧಿಕಾರ ಹಿಡಿದಿದೆ. ಆಡಳಿತ ರೂಢ ಎಡರಂಗ 35 ಸ್ಥಾನಗಳೊಂದಿಗೆ ಹೀನಾಯ ಸೋಲು ಕಂಡು ಅಧಿಕಾರದಿಂದ ಹೊರಬಿದ್ದಿದೆ.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm