ಬ್ರೇಕಿಂಗ್ ನ್ಯೂಸ್
05-05-26 10:27 pm HK News Staffer ದೇಶ - ವಿದೇಶ
ಚೆನ್ನೈ, ಮೇ 5: ತಮಿಳುನಾಡು ಚುನಾವಣೆಯಲ್ಲಿ ದಳಪತಿ ಖ್ಯಾತಿಯ ವಿಜಯ್ ಅವರ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಮೂಲಕ ವಿಜಯ್ ರಾಜ್ಯದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ.
ತಮಿಳಿನ ಸ್ಟಾರ್ ನಟನಾಗಿ, ವೃತ್ತಿ ಬದುಕಿನ ಉತ್ತುಂಗದಲ್ಲಿದ್ದಾಗಲೇ ವಿಜಯ್ ಸಿನಿಮಾ ಬಿಟ್ಟು ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರ ನಡೆ ಬಹುತೇಕರಿಗೆ ಅಚ್ಚರಿ ತಂದಿತ್ತು. ಚುನಾವಣೆಯಲ್ಲಿ ಅವರಿಗೆ ಹೆಚ್ಚೇನೂ ಸ್ಥಾನ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ವಿಜಯ್ ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗಳಿಸಿ ಹೊಸ ಇತಿಹಾಸ ಬರೆದಿದೆ.
ವಿಜಯ್ ಅವರ ಗೆಲುವು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನಟ ವಿಜಯ್ ಅವರು ಮಾಜಿ ಸಿಎಂ ಕರುಣಾನಿಧಿ ಜೊತೆಗೆ ನಿಂತುಕೊಂಡಿದ್ದ ಹಳೆಯ ಫೋಟೋವನ್ನು ಹಂಚಿಕೊಂಡಿದ್ದು, ಕುಹಕದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೊ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯನ್ನು ದೊಡ್ಡ ಅಂತರದಲ್ಲಿ ಸೋಲಿಸಿ ದ್ರಾವಿಡ ನಾಡಿನಲ್ಲಿ ನೂತನ ಸಿಎಂ ಆಗಲು ವಿಜಯ್ ಸಜ್ಜಾಗಿರುವಾಗಲೇ ಈ ಫೋಟೊ ಬಂದಿರುವುದು ಗಮನ ಸೆಳೆದಿದೆ.
ಸ್ಟಾಲಿನ್ ಸೋಲಿನ ಬೆನ್ನಲ್ಲೇ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ವಿಜಯ್ ಅವರ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವುದನ್ನು ಕಾಣಬಹುದು. ಈ ಫೋಟೋಗೆ ಆರ್ಜಿವಿ ತಮ್ಮದೇ ಧಾಟಿಯಲ್ಲಿ ವರ್ಣನೆ ನೀಡಿದ್ದಾರೆ. 'ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತನ್ನ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕಲೈಂಜರ್ (ಕರುಣಾನಿಧಿ) ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ," ಎಂದು ಬರೆದಿದ್ದಾರೆ.
ವಿಜಯ್ ಅವರ ಈ ಐತಿಹಾಸಿಕ ಗೆಲುವಿಗೆ ಸ್ಟಾರ್ ನಟರಾದ ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಖುಷ್ಟೂ ಸುಂದರ್, ಕೀರ್ತಿ ಸುರೇಶ್, ಎ.ಆರ್. ರೆಹಮಾನ್, ಶಿವಕಾರ್ತಿಕೇಯನ್, ಮೋಹನ್ ಲಾಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
In a surprising political twist, actor-turned-politician Vijay, popularly known as “Dalapathi,” has shaken the political landscape of Tamil Nadu. A viral photo circulating on social media shows a younger Vijay standing behind veteran leader M. Karunanidhi, sparking widespread चर्चा and nostalgia.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm