ಬ್ರೇಕಿಂಗ್ ನ್ಯೂಸ್
06-05-26 11:02 pm HK News Desk ದೇಶ - ವಿದೇಶ
ಚೆನ್ನೈ, ಮೇ 6 ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ತನ್ನ ಸಂಪೂರ್ಣ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದೆ. ಇದೇ ವೇಳೆ, ವಿಜಯ್ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದು ಶೀಘ್ರ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಟಿವಿಕೆ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಪತ್ರದಲ್ಲಿ ಹೇಳಿದೆ. ಅಲ್ಲದೆ, ಭಾರತ ಸಂವಿಧಾನವನ್ನು ನಂಬದ ಯಾವುದೇ ಶಕ್ತಿಗಳನ್ನು ಈ ಮೈತ್ರಿಯಿಂದ ದೂರವಿಡುವ ವರೆಗೆ ನಮ್ಮ ಬೆಂಬಲ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿ, ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ಸುವರ್ಣಯುಗವನ್ನು ಮರಳಿ ತರಲು ಪ್ರಯತ್ನಿಸಲಿದೆ. ಜೊತೆಗೆ ತಂದೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ತತ್ವಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆದರ್ಶಗಳನ್ನು ಮುಂದಿನ ವರ್ಷಗಳಲ್ಲಿ ಮುಂದುವರಿಸುವ ಬದ್ಧತೆಯೂ ಇದೆ ಎಂದು ಹೇಳಿದೆ. ಕಾಂಗ್ರೆಸ್, ಟಿವಿಕೆಯೊಂದಿಗೆ ಈ ಮೈತ್ರಿ ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗದೇ, ಭವಿಷ್ಯದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ತನ್ನ ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ವಿಜಯ್ ಅವರು ಹೂಮಾಲೆ ಸ್ವಾಗತಿಸಿದ್ದಾರೆ. ಇದೇ ವೇಳೆ, ತನ್ನೊಂದಿಗಿನ ಮೈತ್ರಿ ಮುರಿದುಕೊಂಡು ಟಿವಿಕೆ ಜೊತೆ ಸೇರಿದ ಕಾಂಗ್ರೆಸ್ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಕಿಡಿಕಾರಿದ್ದು ಬೆನ್ನಿಗೆ ಚೂರಿ ಹಾಕಿದ್ದಾಗಿ ಕಟು ನುಡಿಯಾಡಿದೆ
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm