ಬ್ರೇಕಿಂಗ್ ನ್ಯೂಸ್
06-05-26 11:02 pm HK News Desk ದೇಶ - ವಿದೇಶ
ಚೆನ್ನೈ, ಮೇ 6 ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ತನ್ನ ಸಂಪೂರ್ಣ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದೆ. ಇದೇ ವೇಳೆ, ವಿಜಯ್ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದು ಶೀಘ್ರ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಟಿವಿಕೆ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಪತ್ರದಲ್ಲಿ ಹೇಳಿದೆ. ಅಲ್ಲದೆ, ಭಾರತ ಸಂವಿಧಾನವನ್ನು ನಂಬದ ಯಾವುದೇ ಶಕ್ತಿಗಳನ್ನು ಈ ಮೈತ್ರಿಯಿಂದ ದೂರವಿಡುವ ವರೆಗೆ ನಮ್ಮ ಬೆಂಬಲ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿ, ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ಸುವರ್ಣಯುಗವನ್ನು ಮರಳಿ ತರಲು ಪ್ರಯತ್ನಿಸಲಿದೆ. ಜೊತೆಗೆ ತಂದೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ತತ್ವಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆದರ್ಶಗಳನ್ನು ಮುಂದಿನ ವರ್ಷಗಳಲ್ಲಿ ಮುಂದುವರಿಸುವ ಬದ್ಧತೆಯೂ ಇದೆ ಎಂದು ಹೇಳಿದೆ. ಕಾಂಗ್ರೆಸ್, ಟಿವಿಕೆಯೊಂದಿಗೆ ಈ ಮೈತ್ರಿ ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗದೇ, ಭವಿಷ್ಯದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ತನ್ನ ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ವಿಜಯ್ ಅವರು ಹೂಮಾಲೆ ಸ್ವಾಗತಿಸಿದ್ದಾರೆ. ಇದೇ ವೇಳೆ, ತನ್ನೊಂದಿಗಿನ ಮೈತ್ರಿ ಮುರಿದುಕೊಂಡು ಟಿವಿಕೆ ಜೊತೆ ಸೇರಿದ ಕಾಂಗ್ರೆಸ್ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಕಿಡಿಕಾರಿದ್ದು ಬೆನ್ನಿಗೆ ಚೂರಿ ಹಾಕಿದ್ದಾಗಿ ಕಟು ನುಡಿಯಾಡಿದೆ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm