ಬ್ರೇಕಿಂಗ್ ನ್ಯೂಸ್
07-05-26 12:52 pm HK News Staffer ದೇಶ - ವಿದೇಶ
ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಡಿಎಂಕೆ - ಎಐಎಡಿಎಂಕೆ ಬಹುಕಾಲದ ವೈರತ್ವ ಬದಿಗಿಟ್ಟು ಒಂದಾಗಲಿದೆ ಎನ್ನುವ ವದಂತಿ ನಡುವೆಯೇ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂಗ್ಲಿಷ್ ದೈನಿಕ ಒಂದಕ್ಕೆ ಪ್ರತಿಕ್ರಿಯಿಸಿ, ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಡಿಎಂಕೆ ಪಕ್ಷವು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸುವುದಕ್ಕೆ ಕಾಯಲು ಸಿದ್ಧವಾಗಿದೆ. ಆರು ತಿಂಗಳ ಕಾಲ ಯಾವುದೇ ಅಡ್ಡಿಯಿಲ್ಲದೇ ಬೆಳವಣಿಗೆಯನ್ನು ಗಮನಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಸ್ಟಾಲಿನ್ ಹೇಳಿಕೆಯಿಂದ ಮೈತ್ರಿ ಸಾಧ್ಯತೆಗಳ ಕುರಿತು ಹರಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ರಾಜ್ಯದಲ್ಲಿ ಸಂವಿಧಾನಾತ್ಮಕ ಸಂಕಷ್ಟ ಅಥವಾ ಮತ್ತೊಂದು ಚುನಾವಣೆ ಎದುರಿಸುವಂತಹ ಸ್ಥಿತಿ ಬರಬಾರದು ಎಂದು ಹೇಳಿದ ಸ್ಟಾಲಿನ್, ಹೊಸ ಸರ್ಕಾರವು ತಮ್ಮ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ಮುಂದುವರಿಸಬೇಕು. ಜೊತೆಗೆ, ಟಿವಿಕೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.
ಮಹಿಳೆಯರಿಗೆ 2,500 ರೂ. ಪ್ರತಿ ತಿಂಗಳು ನೀಡುವ ವಿಜಯ್ ಭರವಸೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟಾಲಿನ್, ಅದು ಈಡೇರಿಸಲು ಕಷ್ಟದ ಭರವಸೆ. ಕನಿಷ್ಠ ನಾವು ನೀಡಿದಂತೆ 1,000 ರೂ. ಆದರೂ ನೀಡಿ ಎಂದು ಹೇಳಿದರು.
ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನ ಪಡೆಯಲು ವಿಫಲವಾಗಿದೆ. ಕಾಂಗ್ರೆಸ್ ಬೆಂಬಲ ನೀಡಿದ ನಂತರ ಟಿವಿಕೆ ಬಲ 112ಕ್ಕೇರಿದ್ದರೂ, ಸರ್ಕಾರ ರಚಿಸಲು ಇನ್ನೂ ಐದು ಸ್ಥಾನಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಪಕ್ಷವು ಸಿಪಿಐ ಮತ್ತು ವಿಡುತಲೈ ಚಿರುಥೈಗಲ್ ಕಚ್ಚಿ ಪಕ್ಷಗಳ ಬೆಂಬಲ ಯಾಚಿಸಿದೆ. ವಿಜಯ್ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರೂ, ಪೂರ್ಣ ಬಹುಮತ ತೋರಿಸಿದ ನಂತರವೇ ಬನ್ನಿ ಎಂದು ಹೇಳಿದ್ದಾರೆನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ವಿಜಯ್ ಪಕ್ಷವನ್ನು ಬದಿಗಿಟ್ಟು ಡಿಎಂಕೆ - ಎಐಎಡಿಎಂಕೆ ಸೇರಿ ಸರ್ಕಾರ ರಚಿಸಲಿದೆ ಎಂಬ ವದಂತಿ ಹರಡಿತ್ತು. ಆದರೆ ಸ್ಟಾಲಿನ್ ಈ ವದಂತಿಯನ್ನು ತಳ್ಳಿಹಾಕಿದ್ದು ಸರ್ಕಾರ ರಚನೆಯ ಕಸರತ್ತಿನಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.
ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನ, ಎಐಎಡಿಎಂಕೆ 47, ಟಿವಿಕೆ 108, ಪಿಎಂಕೆ 4, ಕಾಂಗ್ರೆಸ್ 5, ಐಯುಎಂಎಲ್ 2, ಸಿಪಿಐ 2, ಸಿಪಿಎಂ 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನ ಗೆದ್ದಿವೆ.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm