ಬ್ರೇಕಿಂಗ್ ನ್ಯೂಸ್
07-05-26 12:52 pm HK News Staffer ದೇಶ - ವಿದೇಶ
ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಡಿಎಂಕೆ - ಎಐಎಡಿಎಂಕೆ ಬಹುಕಾಲದ ವೈರತ್ವ ಬದಿಗಿಟ್ಟು ಒಂದಾಗಲಿದೆ ಎನ್ನುವ ವದಂತಿ ನಡುವೆಯೇ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂಗ್ಲಿಷ್ ದೈನಿಕ ಒಂದಕ್ಕೆ ಪ್ರತಿಕ್ರಿಯಿಸಿ, ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಡಿಎಂಕೆ ಪಕ್ಷವು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸುವುದಕ್ಕೆ ಕಾಯಲು ಸಿದ್ಧವಾಗಿದೆ. ಆರು ತಿಂಗಳ ಕಾಲ ಯಾವುದೇ ಅಡ್ಡಿಯಿಲ್ಲದೇ ಬೆಳವಣಿಗೆಯನ್ನು ಗಮನಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಸ್ಟಾಲಿನ್ ಹೇಳಿಕೆಯಿಂದ ಮೈತ್ರಿ ಸಾಧ್ಯತೆಗಳ ಕುರಿತು ಹರಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ರಾಜ್ಯದಲ್ಲಿ ಸಂವಿಧಾನಾತ್ಮಕ ಸಂಕಷ್ಟ ಅಥವಾ ಮತ್ತೊಂದು ಚುನಾವಣೆ ಎದುರಿಸುವಂತಹ ಸ್ಥಿತಿ ಬರಬಾರದು ಎಂದು ಹೇಳಿದ ಸ್ಟಾಲಿನ್, ಹೊಸ ಸರ್ಕಾರವು ತಮ್ಮ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ಮುಂದುವರಿಸಬೇಕು. ಜೊತೆಗೆ, ಟಿವಿಕೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.
ಮಹಿಳೆಯರಿಗೆ 2,500 ರೂ. ಪ್ರತಿ ತಿಂಗಳು ನೀಡುವ ವಿಜಯ್ ಭರವಸೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟಾಲಿನ್, ಅದು ಈಡೇರಿಸಲು ಕಷ್ಟದ ಭರವಸೆ. ಕನಿಷ್ಠ ನಾವು ನೀಡಿದಂತೆ 1,000 ರೂ. ಆದರೂ ನೀಡಿ ಎಂದು ಹೇಳಿದರು.
ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನ ಪಡೆಯಲು ವಿಫಲವಾಗಿದೆ. ಕಾಂಗ್ರೆಸ್ ಬೆಂಬಲ ನೀಡಿದ ನಂತರ ಟಿವಿಕೆ ಬಲ 112ಕ್ಕೇರಿದ್ದರೂ, ಸರ್ಕಾರ ರಚಿಸಲು ಇನ್ನೂ ಐದು ಸ್ಥಾನಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಪಕ್ಷವು ಸಿಪಿಐ ಮತ್ತು ವಿಡುತಲೈ ಚಿರುಥೈಗಲ್ ಕಚ್ಚಿ ಪಕ್ಷಗಳ ಬೆಂಬಲ ಯಾಚಿಸಿದೆ. ವಿಜಯ್ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರೂ, ಪೂರ್ಣ ಬಹುಮತ ತೋರಿಸಿದ ನಂತರವೇ ಬನ್ನಿ ಎಂದು ಹೇಳಿದ್ದಾರೆನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ವಿಜಯ್ ಪಕ್ಷವನ್ನು ಬದಿಗಿಟ್ಟು ಡಿಎಂಕೆ - ಎಐಎಡಿಎಂಕೆ ಸೇರಿ ಸರ್ಕಾರ ರಚಿಸಲಿದೆ ಎಂಬ ವದಂತಿ ಹರಡಿತ್ತು. ಆದರೆ ಸ್ಟಾಲಿನ್ ಈ ವದಂತಿಯನ್ನು ತಳ್ಳಿಹಾಕಿದ್ದು ಸರ್ಕಾರ ರಚನೆಯ ಕಸರತ್ತಿನಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.
ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನ, ಎಐಎಡಿಎಂಕೆ 47, ಟಿವಿಕೆ 108, ಪಿಎಂಕೆ 4, ಕಾಂಗ್ರೆಸ್ 5, ಐಯುಎಂಎಲ್ 2, ಸಿಪಿಐ 2, ಸಿಪಿಎಂ 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನ ಗೆದ್ದಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm