ಬ್ರೇಕಿಂಗ್ ನ್ಯೂಸ್
07-05-26 08:57 pm HK News Staffer ದೇಶ - ವಿದೇಶ
ತಿರುವನಂತಪುರಂ, ಮೇ 7: ಕೇರಳದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳಿದ್ದು, ಆಡಳಿತದ ಚುಕ್ಕಾಣಿ ಹಿಡಿಯಲು ಪ್ರಮುಖ ನಾಯಕರ ನಡುವೆ ಪೈಪೋಟಿ ಜೋರಾಗಿದೆ. ಕಳೆದ ಬಾರಿ ವಿಪಕ್ಷ ನಾಯಕರಾಗಿದ್ದ ವಿ.ಡಿ ಸತೀಶನ್, ಕೆಸಿ ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ, ಗುರುವಾರ ಬೆಳಗ್ಗೆ ಎಐಸಿಸಿ ವೀಕ್ಷಕರು ಕಾಂಗ್ರೆಸ್ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ವೀಕ್ಷಕರಾಗಿ ಪಕ್ಷದ ಹಿರಿಯ ಮುಖಂಡರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಆಗಮಿಸಿದ್ದು ತಿರುವನಂತಪುರದ ಇಂದಿರಾ ಭವನದಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೆ, ಖಾಸಗಿ ಹೊಟೇಲ್ ನಲ್ಲಿಯೂ ಸಭೆ ನಡೆಸಿ ಅಭಿಪ್ರಾಯ ಕೇಳಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ವಹಿಸಿದ್ದಾರೆನ್ನುವ ಮಾಹಿತಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಾಕನ್, ನಾವು ಅಭಿಪ್ರಾಯ ಸಂಗ್ರಹಿಸಿದ್ದು ಇದರ ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ, ಒಂದೆರಡು ದಿನದಲ್ಲಿ ಹೊಸ ಸಿಎಂ ನಿರ್ಧಾರ ಆಗಲಿದೆ ಎಂದಿದ್ದಾರೆ.
ಇದೇ ವೇಳೆ, ಮೂವರು ನಾಯಕರ ಬೆಂಬಲಿಗರು ಸಿಎಂ ಸ್ಥಾನಕ್ಕಾಗಿ ತೀವ್ರ ಲಾಬಿ ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಾಯಕರ ಪರವಾಗಿ ಅಭಿಯಾನ ನಡೆಸಿದ್ದಾರೆ. ವಿ.ಡಿ. ಸತೀಶನ್ ಪರವಾಗಿ ಎರ್ನಾಕುಲಂ ಜಿಲ್ಲೆಯಲ್ಲಿ, ವೇಣುಗೋಪಾಲ್ ಪರವಾಗಿ ದೆಹಲಿಯಲ್ಲಿ ಬೆಂಬಲಿಗರು ಅಭಿನಂದನಾ ಸಮಾರಂಭಗಳನ್ನು ಆಯೋಜಿಸಿದ್ದಾರೆ.
ವಿಪಕ್ಷ ಮುಖಂಡರಾಗಿ ಪಕ್ಷದ ಸಾರಥ್ಯ ವಹಿಸಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ವಿಡಿ ಸತೀಶನ್ ಶ್ರಮಿಸಿದ್ದಾರೆ. ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು ಎಂದು ಅವರ ಬೆಂಬಲಿಗರು ವಾದಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಜನಪ್ರಿಯತೆ ಮತ್ತು ಜನಬೆಂಬಲ ಮಾತ್ರ ಮುಖ್ಯವಲ್ಲ, ಪಕ್ಷದ ಶಾಸಕರ ಬೆಂಬಲವೂ ನಿರ್ಣಾಯಕ ಎಂದು ವೇಣುಗೋಪಾಲ್ ಬೆಂಬಲಿಗರು ಹೇಳುತ್ತಿದ್ದಾರೆ.
ಕೆ.ಸಿ. ವೇಣುಗೋಪಾಲ್ ರಾಜ್ಯಸಭೆ ಸಂಸದರಾಗಿದ್ದು, ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿಲ್ಲ. ಆದರೂ ರಾಹುಲ್ ಗಾಂಧಿ ಅವರ ಜತೆಗಿನ ಸಖ್ಯವು ಇವರನ್ನು ಸಿಎಂ ಗಾದಿಗೆ ಹತ್ತಿರವಾಗಿಸಿದೆ. ರಾಹುಲ್ ಅವರ ಕಟ್ಟಾ ನಿಷ್ಠಾವಂತರಲ್ಲಿ ವೇಣುಗೋಪಾಲ್ ಒಬ್ಬರಾಗಿದ್ದು ಮತ್ತು ಕ್ರಿಸ್ತಿಯನ್ ಸಮುದಾಯ ಆಗಿರುವುದರಿಂದ ಇವರ ಆಯ್ಕೆಗೆ ಪ್ರಬಲ ಲಾಬಿ ಕೇಳಿಬಂದಿದೆ. ಇದೇ ವೇಳೆ ವೇಣುಗೋಪಾಲ್ ದೆಹಲಿಯಲ್ಲಿ ಇರುವುದರಿಂದ ಹೊರಗಿನವರು, ಒಳಗಿನವರು ಎಂಬ ವಿಚಾರದಲ್ಲೂ ಹಗ್ಗಜಗ್ಗಾಟ ನಡೆಯುತ್ತಿದೆ.
ಒಂದ್ವೇಳೆ, ಸಿಎಂ ಸ್ಥಾನ ಸಿಗದೇ ಇದ್ದರೆ ತಾನು ಯಾವುದೇ ಮಂತ್ರಿ ಸ್ಥಾನವನ್ನೂ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ಶಾಸಕನಾಗಿಯೇ ಇರುತ್ತೇನೆ ಎಂದು ವಿಡಿ ಸತೀಶನ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಎಐಸಿಸಿಗೆ ಶುಕ್ರವಾರದ ವೇಳೆಗೆ ವರದಿ ಸಲ್ಲಿಕೆಯಾದರೆ ಮೇ 10ರಂದು ಕೇರಳ ಸಿಎಂ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm