ಬ್ರೇಕಿಂಗ್ ನ್ಯೂಸ್
07-05-26 08:57 pm HK News Staffer ದೇಶ - ವಿದೇಶ
ತಿರುವನಂತಪುರಂ, ಮೇ 7: ಕೇರಳದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳಿದ್ದು, ಆಡಳಿತದ ಚುಕ್ಕಾಣಿ ಹಿಡಿಯಲು ಪ್ರಮುಖ ನಾಯಕರ ನಡುವೆ ಪೈಪೋಟಿ ಜೋರಾಗಿದೆ. ಕಳೆದ ಬಾರಿ ವಿಪಕ್ಷ ನಾಯಕರಾಗಿದ್ದ ವಿ.ಡಿ ಸತೀಶನ್, ಕೆಸಿ ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ, ಗುರುವಾರ ಬೆಳಗ್ಗೆ ಎಐಸಿಸಿ ವೀಕ್ಷಕರು ಕಾಂಗ್ರೆಸ್ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ವೀಕ್ಷಕರಾಗಿ ಪಕ್ಷದ ಹಿರಿಯ ಮುಖಂಡರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಆಗಮಿಸಿದ್ದು ತಿರುವನಂತಪುರದ ಇಂದಿರಾ ಭವನದಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೆ, ಖಾಸಗಿ ಹೊಟೇಲ್ ನಲ್ಲಿಯೂ ಸಭೆ ನಡೆಸಿ ಅಭಿಪ್ರಾಯ ಕೇಳಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ವಹಿಸಿದ್ದಾರೆನ್ನುವ ಮಾಹಿತಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಾಕನ್, ನಾವು ಅಭಿಪ್ರಾಯ ಸಂಗ್ರಹಿಸಿದ್ದು ಇದರ ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ, ಒಂದೆರಡು ದಿನದಲ್ಲಿ ಹೊಸ ಸಿಎಂ ನಿರ್ಧಾರ ಆಗಲಿದೆ ಎಂದಿದ್ದಾರೆ.
ಇದೇ ವೇಳೆ, ಮೂವರು ನಾಯಕರ ಬೆಂಬಲಿಗರು ಸಿಎಂ ಸ್ಥಾನಕ್ಕಾಗಿ ತೀವ್ರ ಲಾಬಿ ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಾಯಕರ ಪರವಾಗಿ ಅಭಿಯಾನ ನಡೆಸಿದ್ದಾರೆ. ವಿ.ಡಿ. ಸತೀಶನ್ ಪರವಾಗಿ ಎರ್ನಾಕುಲಂ ಜಿಲ್ಲೆಯಲ್ಲಿ, ವೇಣುಗೋಪಾಲ್ ಪರವಾಗಿ ದೆಹಲಿಯಲ್ಲಿ ಬೆಂಬಲಿಗರು ಅಭಿನಂದನಾ ಸಮಾರಂಭಗಳನ್ನು ಆಯೋಜಿಸಿದ್ದಾರೆ.
ವಿಪಕ್ಷ ಮುಖಂಡರಾಗಿ ಪಕ್ಷದ ಸಾರಥ್ಯ ವಹಿಸಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ವಿಡಿ ಸತೀಶನ್ ಶ್ರಮಿಸಿದ್ದಾರೆ. ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು ಎಂದು ಅವರ ಬೆಂಬಲಿಗರು ವಾದಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಜನಪ್ರಿಯತೆ ಮತ್ತು ಜನಬೆಂಬಲ ಮಾತ್ರ ಮುಖ್ಯವಲ್ಲ, ಪಕ್ಷದ ಶಾಸಕರ ಬೆಂಬಲವೂ ನಿರ್ಣಾಯಕ ಎಂದು ವೇಣುಗೋಪಾಲ್ ಬೆಂಬಲಿಗರು ಹೇಳುತ್ತಿದ್ದಾರೆ.
ಕೆ.ಸಿ. ವೇಣುಗೋಪಾಲ್ ರಾಜ್ಯಸಭೆ ಸಂಸದರಾಗಿದ್ದು, ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿಲ್ಲ. ಆದರೂ ರಾಹುಲ್ ಗಾಂಧಿ ಅವರ ಜತೆಗಿನ ಸಖ್ಯವು ಇವರನ್ನು ಸಿಎಂ ಗಾದಿಗೆ ಹತ್ತಿರವಾಗಿಸಿದೆ. ರಾಹುಲ್ ಅವರ ಕಟ್ಟಾ ನಿಷ್ಠಾವಂತರಲ್ಲಿ ವೇಣುಗೋಪಾಲ್ ಒಬ್ಬರಾಗಿದ್ದು ಮತ್ತು ಕ್ರಿಸ್ತಿಯನ್ ಸಮುದಾಯ ಆಗಿರುವುದರಿಂದ ಇವರ ಆಯ್ಕೆಗೆ ಪ್ರಬಲ ಲಾಬಿ ಕೇಳಿಬಂದಿದೆ. ಇದೇ ವೇಳೆ ವೇಣುಗೋಪಾಲ್ ದೆಹಲಿಯಲ್ಲಿ ಇರುವುದರಿಂದ ಹೊರಗಿನವರು, ಒಳಗಿನವರು ಎಂಬ ವಿಚಾರದಲ್ಲೂ ಹಗ್ಗಜಗ್ಗಾಟ ನಡೆಯುತ್ತಿದೆ.
ಒಂದ್ವೇಳೆ, ಸಿಎಂ ಸ್ಥಾನ ಸಿಗದೇ ಇದ್ದರೆ ತಾನು ಯಾವುದೇ ಮಂತ್ರಿ ಸ್ಥಾನವನ್ನೂ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ಶಾಸಕನಾಗಿಯೇ ಇರುತ್ತೇನೆ ಎಂದು ವಿಡಿ ಸತೀಶನ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಎಐಸಿಸಿಗೆ ಶುಕ್ರವಾರದ ವೇಳೆಗೆ ವರದಿ ಸಲ್ಲಿಕೆಯಾದರೆ ಮೇ 10ರಂದು ಕೇರಳ ಸಿಎಂ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am