ಬ್ರೇಕಿಂಗ್ ನ್ಯೂಸ್
07-05-26 10:29 pm HK News Staffer ದೇಶ - ವಿದೇಶ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲ ಆರ್ಎನ್ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹೀನಾಯ ಸೋಲು ಕಂಡಿದ್ದರೂ, ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ರಾಜಕೀಯ ಹೈಡ್ರಾಮಾ ಮುಂದುವರಿಸಿದ್ದರು.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಟಿಎಂಸಿ ಸೋತಿಲ್ಲ, ಚುನಾವಣಾ ಆಯೋಗದ ಕಾರಣ ಬಿಜೆಪಿ ಗೆದ್ದಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ” ಎಂದು ಸವಾಲು ಹಾಕಿದ್ದರು. ಈ ಹೇಳಿಕೆ ಬಂಗಾಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇದೀಗ ಸಂವಿಧಾನದ 172ನೇ ವಿಧಿಯ ಪ್ರಕಾರ, 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ 17ನೇ ವಿಧಾನಸಭೆಯ ಐದು ವರ್ಷದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಭೆಯ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲ ಆರ್ಎನ್ ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 07ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ಈ ಕ್ರಮದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ 294 ಶಾಸಕರ ಸದಸ್ಯತ್ವವೂ ರದ್ದುಗೊಂಡಿದೆ. ಮಮತಾ ರಾಜೀನಾಮೆ ನೀಡಲು ನಿರಾಕರಿಸಿದ್ದರೂ, ಸಂವಿಧಾನಾತ್ಮಕ ಪ್ರಕ್ರಿಯೆಯಂತೆ ಅವರ ಸರ್ಕಾರದ ಅವಧಿ ಅಂತ್ಯಗೊಂಡಿರುವುದರಿಂದ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಸಾಧಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಅಚ್ಚರಿಯ ಸಂಗತಿ ಎಂದರೆ, ಸ್ವತಃ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಲ್ಲೇ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಇದೀಗ ರಾಜ್ಯಪಾಲರು ಬಹುಮತ ಪಡೆದ ಬಿಜೆಪಿ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸುವ ಸಾಧ್ಯತೆ ದಟ್ಟವಾಗಿದ್ದು, ಮೇ 9ರಂದು ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ತಿರುವು ಎಂದು ವಿಶ್ಲೇಷಿಸಲಾಗುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am