ಬ್ರೇಕಿಂಗ್ ನ್ಯೂಸ್
08-05-26 12:06 pm HK News Staffer ದೇಶ - ವಿದೇಶ
ಮುಂಬೈ, ಮೇ 8: ನವಿ ಮುಂಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಓರ್ವ ಪ್ರಯಾಣಿಕನ ಗಲಾಟೆ ಇಡೀ ಪ್ರಯಾಣವನ್ನು ಗೊಂದಲದ ಗೂಡನ್ನಾಗಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಉದ್ದ ಸಾಲುಗಳು, ಭದ್ರತಾ ತಪಾಸಣೆ, ಗೇಟ್ ಬದಲಾವಣೆ ಮತ್ತು ವಿಳಂಬಗಳಿಂದಲೇ ವಿಮಾನ ಪ್ರಯಾಣಿಕರು ಬೇಸತ್ತಿರುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಮತ್ತಷ್ಟು ಕಿರಿಕಿರಿಯಾಗಿದ್ದು, ವಿಮಾನದೊಳಗೇ ವಾಗ್ವಾದ ಮತ್ತು ಉದ್ವಿಗ್ನತೆ ಸೃಷ್ಟಿಯಾಗಿದೆ.
ಮಾಹಿತಿ ಪ್ರಕಾರ, ಮುಂಬೈಯಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ಟೇಕ್ ಆಫ್ ಆಗಬೇಕಿದ್ದ ವಿಮಾನ, ಓರ್ವ ಪ್ರಯಾಣಿಕ ತನ್ನ ಪತ್ನಿಯೊಂದಿಗೆ ತಡವಾಗಿ ಆಗಮಿಸಿದ ಕಾರಣ ಮಧ್ಯಾಹ್ನ 12.23ಕ್ಕೆ ಹೊರಟಿದೆ. ಆ ವೇಳೆ ಉಳಿದ ಎಲ್ಲಾ ಪ್ರಯಾಣಿಕರು ಅದಾಗಲೇ ವಿಮಾನದಲ್ಲಿ ಕುಳಿತು ಕಾಯುತ್ತಿದ್ದರು. ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ಆದ ವಿಡಿಯೋದಲ್ಲಿ, ತಡವಾಗಿ ಬಂದ ಪ್ರಯಾಣಿಕ ಹಾಗೂ ಬಳಿಕ ವಿಮಾನಕ್ಕೇರಿದ ಅವರ ಪತ್ನಿಯನ್ನು ನೋಡಿ ಕೆಲವರು ವ್ಯಂಗ್ಯವಾಗಿ ಚಪ್ಪಾಳೆ ತಟ್ಟಿ ಅಸಮಾಧಾನ ಹೊರಹಾಕಿರುವುದು ಕಂಡುಬಂದಿದೆ.
ಆದರೆ ಘಟನೆ ಅಲ್ಲಿಗೇ ನಿಲ್ಲಲಿಲ್ಲ. ಬಳಿಕ ವಿಮಾನದೊಳಗೆ ಕೆಲ ಪ್ರಯಾಣಿಕರು ತೀವ್ರ ವಾಗ್ವಾದ ನಡೆಸಿದ್ದಾರೆ. ಆತ ಸಹ ಪ್ರಯಾಣಿಕರೊಂದಿಗೆ ಆಕ್ರೋಶದಿಂದ ಮಾತನಾಡಿ, ಅಸಭ್ಯ ಪದ ಬಳಕೆ ಮಾಡಿದ್ದಲ್ಲದೆ, “ನೀಚೇ ಉತರ್ ದಿಖಾತಾ ಹೂಂ ಕೌನ್ ಹೂಂ ಮೈ…” (ಕೆಳಗಿಳಿದ ಬಳಿಕ ನಾನ್ಯಾರೆಂದು ತೋರಿಸುತ್ತೇನೆ) ಎಂದು ಬೆದರಿಕೆ ಹಾಕಿದ್ದಾನೆ.
ತನ್ನ ವಿಳಂಬವನ್ನು ಸಮರ್ಥಿಸಿಕೊಳ್ಳಲು “ವಿಮಾನಗಳು ಯಾವಾಗಲೂ ತಡವಾಗುತ್ತವೆ” ಎಂದು ಆತ ಹೇಳಿದ ಮಾತು ಉಳಿದ ಪ್ರಯಾಣಿಕರ ಕೋಪವನ್ನು ಇನ್ನಷ್ಟು ಹೆಚ್ಚಿಸಿದೆ. ಕೊನೆಗೆ ಪ್ರಯಾಣಿಕರ ಒತ್ತಾಯದ ಮೇರೆಗೆ ಆತ ಕ್ಷಮೆ ಕೇಳಿದ್ದಾನೆ. ಬಳಿಕ ವಿಮಾನ ಮಂಗಳೂರು ಕಡೆ ಪ್ರಯಾಣ ಮುಂದುವರಿಸಿತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಿಸ್ತು ಮತ್ತು ಪರಸ್ಪರ ಗೌರವದ ಬಗ್ಗೆ ದೊಡ್ಡ ಚರ್ಚೆ ಆರಂಭವಾಗಿದೆ. ಸಮಯಕ್ಕೆ ಸರಿಯಾಗಿ ಬಂದು ಎಲ್ಲಾ ನಿಯಮಗಳನ್ನು ಪಾಲಿಸುವ ಪ್ರಯಾಣಿಕರಿಗೆ, ಕೆಲವರು ಮಾತ್ರ ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ತಿಸುವುದು ಅಸಮಾಧಾನ ಮೂಡಿಸಿದೆ.
@Ministry_CA @mohol_murlidhar @Dev_Fadnavis @NidhiKamdarMH
— Punita Toraskar (@impuni) May 7, 2026
I am on board Mangaluru flight from Navi Mumbai . Our flight which was supposed to take off at 11.00 is taking off now at 12.23 bcoz of one passenger who arrived at 1100 for a flight supposed to take off at 1100 .
And… pic.twitter.com/LsMTz9I6yW
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm